AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jallikattu: ಜಲ್ಲಿಕಟ್ಟು ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ಎಳೆದೊಯ್ದಿತು; ವ್ಯಕ್ತಿ ಚಿಂತಾಜನಕ

Jallikattu: ತಮಿಳುನಾಡು ಸಿಂಗಾರಪಲ್ಲಿಯಲ್ಲಿ ನಡೆಯುತ್ತಿದ್ದ ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿಯನ್ನು ಹಿಡಿಯಲು ಹೋದ ವ್ಯಕ್ತಿಯನ್ನು ಹೋರಿ ಎಳೆದೊಯ್ದು ಅವಘಡ ಸಂಭವಿಸಿದೆ.

Jallikattu: ಜಲ್ಲಿಕಟ್ಟು ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ಎಳೆದೊಯ್ದಿತು; ವ್ಯಕ್ತಿ ಚಿಂತಾಜನಕ
ಜಲ್ಲಿಕಟ್ಟು ಸ್ಪರ್ಧೆ
shruti hegde
|

Updated on:Feb 12, 2021 | 12:16 PM

Share

ತಮಿಳುನಾಡು: ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ವ್ಯಕ್ತಿಯನ್ನು ಎಳೆದೊಯ್ದ ಘಟನೆ ಸಿಂಗಾರಪಲ್ಲಿಯಲ್ಲಿ ಏರ್ಪಡಿಸಿದ್ದ ಜಲ್ಲಿಕಟ್ಟು ಸ್ಪರ್ಧೆ ವೇಳೆ ನಡೆದಿದೆ. ವ್ಯಕ್ತಿಯ ಜೊತೆ ಎಳೆದುಕೊಂಡು ಎತ್ತು ಓಡಿದ್ದರಿಂದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಕೃಷ್ಣಗಿರಿ ಜಿಲ್ಲೆಯ ಸುತ್ತಮುತ್ತ ನಡೆಯುತ್ತಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕಳೆದ ಒಂದು ತಿಂಗಳಲ್ಲಿ ನಾಲ್ಕೈದು ಅವಘಡ ಸಂಭವಿಸಿದೆ.

ಸಿಂಗಾರ ಪಲ್ಲಿಯಲ್ಲಿ ನಡೆಯುವ ಜಲ್ಲಿಕಟ್ಟು ಸ್ಪರ್ಧೆಗೆ ಸಾವಿರಾರು ಜನ ಸೇರುತ್ತಾರೆ. ಅಲ್ಲಿ ನಡೆಯುವ ವಿಶೇಷ ಸ್ಪರ್ಧೆಗಳಲ್ಲಿ ಜಲ್ಲಿಕಟ್ಟು ಕೂಡಾ ಒಂದು. ಸಂಕ್ರಾಂತಿ ವಿಶೇಷವಾಗಿ ಏರ್ಪಡಿಸಲಾಗುವ ಜಲ್ಲಿಕಟ್ಟು ಸ್ಪರ್ಧೆ ಫೆಬ್ರವರಿ ತಿಂಗಳಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಓಡುತ್ತಿದ್ದ ಹೋರಿಯನ್ನು ಹಿಡಿಯಲು ಹೋಗಿ, ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಅವಘಡ ಸಂಭವಿಸಿದೆ.

Jallikattu Tamil Nadu

ಜಲ್ಲಿಕಟ್ಟು ಸ್ಪರ್ಧೆ

ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಹೋರಿಗಳನ್ನು ಹಿಡಿಯಲಾಗುತ್ತದೆ. ಹೋರಿಗಳನ್ನು ವಿವಿಧ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಹಾಗೂ ಸ್ಪರ್ಧೆಯ ನಡೆಯುವ ಜಾಗವನ್ನೂ ಸಿಂಗರಿಸಿ ಸಿದ್ಧಗೊಳಿಸಲಾಗುತ್ತದೆ. ಜಲ್ಲಿಕಟ್ಟು ಸ್ಪರ್ಧೆಯನ್ನು ನೋಡಲೆಂದೇ ವಿವಿಧ ಪ್ರದೇಶಗಳಿಂದ ಜನರು ನೆರೆದಿರುತ್ತಾರೆ. ಸ್ಪರ್ಧೆಯಲ್ಲಿ ಹೋರಿಗಳನ್ನು ಅಡ್ಡಗಟ್ಟಿ ಹಿಡಿದವರಿಗೆ ಬಹುಮಾನ ವಿತರಿಸಲಾಗುತ್ತದೆ.

jallikattu Tamil Nadu

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ

ಇದನ್ನೂ ಓದಿ: ಜಲ್ಲಿಕಟ್ಟು ನೋಡುವ ವೇಳೆ.. ಮನೆ ಗೋಡೆ ಕುಸಿತ: ಸ್ಥಳದಲ್ಲೇ ಮೂವರ ದುರ್ಮರಣ

Published On - 11:46 am, Fri, 12 February 21

Follow Us
shruti hegde
shruti hegde
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​