AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jallikattu: ಜಲ್ಲಿಕಟ್ಟು ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ಎಳೆದೊಯ್ದಿತು; ವ್ಯಕ್ತಿ ಚಿಂತಾಜನಕ

Jallikattu: ತಮಿಳುನಾಡು ಸಿಂಗಾರಪಲ್ಲಿಯಲ್ಲಿ ನಡೆಯುತ್ತಿದ್ದ ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿಯನ್ನು ಹಿಡಿಯಲು ಹೋದ ವ್ಯಕ್ತಿಯನ್ನು ಹೋರಿ ಎಳೆದೊಯ್ದು ಅವಘಡ ಸಂಭವಿಸಿದೆ.

Jallikattu: ಜಲ್ಲಿಕಟ್ಟು ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ಎಳೆದೊಯ್ದಿತು; ವ್ಯಕ್ತಿ ಚಿಂತಾಜನಕ
ಜಲ್ಲಿಕಟ್ಟು ಸ್ಪರ್ಧೆ
shruti hegde
|

Updated on:Feb 12, 2021 | 12:16 PM

Share

ತಮಿಳುನಾಡು: ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಕಿಲೋಮೀಟರ್​ಗಟ್ಟಲೆ ವ್ಯಕ್ತಿಯನ್ನು ಎಳೆದೊಯ್ದ ಘಟನೆ ಸಿಂಗಾರಪಲ್ಲಿಯಲ್ಲಿ ಏರ್ಪಡಿಸಿದ್ದ ಜಲ್ಲಿಕಟ್ಟು ಸ್ಪರ್ಧೆ ವೇಳೆ ನಡೆದಿದೆ. ವ್ಯಕ್ತಿಯ ಜೊತೆ ಎಳೆದುಕೊಂಡು ಎತ್ತು ಓಡಿದ್ದರಿಂದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಕೃಷ್ಣಗಿರಿ ಜಿಲ್ಲೆಯ ಸುತ್ತಮುತ್ತ ನಡೆಯುತ್ತಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕಳೆದ ಒಂದು ತಿಂಗಳಲ್ಲಿ ನಾಲ್ಕೈದು ಅವಘಡ ಸಂಭವಿಸಿದೆ.

ಸಿಂಗಾರ ಪಲ್ಲಿಯಲ್ಲಿ ನಡೆಯುವ ಜಲ್ಲಿಕಟ್ಟು ಸ್ಪರ್ಧೆಗೆ ಸಾವಿರಾರು ಜನ ಸೇರುತ್ತಾರೆ. ಅಲ್ಲಿ ನಡೆಯುವ ವಿಶೇಷ ಸ್ಪರ್ಧೆಗಳಲ್ಲಿ ಜಲ್ಲಿಕಟ್ಟು ಕೂಡಾ ಒಂದು. ಸಂಕ್ರಾಂತಿ ವಿಶೇಷವಾಗಿ ಏರ್ಪಡಿಸಲಾಗುವ ಜಲ್ಲಿಕಟ್ಟು ಸ್ಪರ್ಧೆ ಫೆಬ್ರವರಿ ತಿಂಗಳಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಓಡುತ್ತಿದ್ದ ಹೋರಿಯನ್ನು ಹಿಡಿಯಲು ಹೋಗಿ, ಹೋರಿಗೆ ಕಟ್ಟಿದ್ದ ಹಗ್ಗ ವ್ಯಕ್ತಿಯ ಕಾಲಿಗೆ ಸಿಲುಕಿ ಅವಘಡ ಸಂಭವಿಸಿದೆ.

Jallikattu Tamil Nadu

ಜಲ್ಲಿಕಟ್ಟು ಸ್ಪರ್ಧೆ

ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಹೋರಿಗಳನ್ನು ಹಿಡಿಯಲಾಗುತ್ತದೆ. ಹೋರಿಗಳನ್ನು ವಿವಿಧ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಹಾಗೂ ಸ್ಪರ್ಧೆಯ ನಡೆಯುವ ಜಾಗವನ್ನೂ ಸಿಂಗರಿಸಿ ಸಿದ್ಧಗೊಳಿಸಲಾಗುತ್ತದೆ. ಜಲ್ಲಿಕಟ್ಟು ಸ್ಪರ್ಧೆಯನ್ನು ನೋಡಲೆಂದೇ ವಿವಿಧ ಪ್ರದೇಶಗಳಿಂದ ಜನರು ನೆರೆದಿರುತ್ತಾರೆ. ಸ್ಪರ್ಧೆಯಲ್ಲಿ ಹೋರಿಗಳನ್ನು ಅಡ್ಡಗಟ್ಟಿ ಹಿಡಿದವರಿಗೆ ಬಹುಮಾನ ವಿತರಿಸಲಾಗುತ್ತದೆ.

jallikattu Tamil Nadu

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ

ಇದನ್ನೂ ಓದಿ: ಜಲ್ಲಿಕಟ್ಟು ನೋಡುವ ವೇಳೆ.. ಮನೆ ಗೋಡೆ ಕುಸಿತ: ಸ್ಥಳದಲ್ಲೇ ಮೂವರ ದುರ್ಮರಣ

Published On - 11:46 am, Fri, 12 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!