AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ಕೊಡಲು ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ

ಅಕ್ಕಿ ಕೊಟ್ಟಿಲ್ಲ ಎಂದು ಹೆತ್ತಮ್ಮನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜಗಳ ವಿಕೋಪಕ್ಕೆ ಹೋದ ನಂತರ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಲಿಯಾದ ರಾಯ್ಬರಿ ಸಿಂಗ್ ಮೇಲೆ ಆಕೆಯ ಮಗ ರೋಹಿದಾಸ್ ಸಿಂಗ್ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡು ಅತಿಯಾದ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಅಕ್ಕಿ ಕೊಡಲು ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಮಗ
ಅಕ್ಕಿImage Credit source: Health
ನಯನಾ ರಾಜೀವ್
|

Updated on: Jan 24, 2025 | 3:48 PM

Share

ಅಕ್ಕಿ ಕೊಡಲು ನಿರಾಕರಿಸಿದ್ದಕ್ಕೆ ತಾಯಿಯನ್ನೇ ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜಗಳ ವಿಕೋಪಕ್ಕೆ ಹೋದ ನಂತರ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಲಿಯಾದ ರಾಯ್ಬರಿ ಸಿಂಗ್ ಮೇಲೆ ಆಕೆಯ ಮಗ ರೋಹಿದಾಸ್ ಸಿಂಗ್ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡು ಅತಿಯಾದ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ರೋಹಿದಾಸ್ ಮತ್ತು ಅವರ ಸಹೋದರ ಲಕ್ಷ್ಮೀಕಾಂತ್ ಸಿಂಗ್ ನಡುವೆ ವಿವಾದ ನಡೆಯುತ್ತಿತ್ತು. 10 ಕೆಜಿಯಷ್ಟು ಅಕ್ಕಿಗಾಗಿ ರೋಹಿದಾಸ್ ತನ್ನ ತಾಯಿಯೊಂದಿಗೆ ಘರ್ಷಣೆ ಮಾಡಿದಾಗ ವಾದವು ಹಿಂಸಾಚಾರಕ್ಕೆ ತಿರುಗಿತು ಎಂದು ವರದಿಯಾಗಿದೆ. ದಾಳಿಯ ನಂತರ, ರೋಹಿದಾಸ್ ಅದೇ ಆಯುಧದಿಂದ ತನ್ನ ಕತ್ತು ಸೀಳಿಕೊಂಡು ಸಾಯಲು ಪ್ರಯತ್ನಿಸಿದ್ದ.

ಅವರನ್ನು ಪಿಆರ್‌ಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಘಟನೆ ವೇಳೆ ದಿನಗೂಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ್ ಮನೆಗೆ ಹಿಂತಿರುಗಿ ಘಟನಾ ಸ್ಥಳವನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಆರೋಪಿಯು ತನ್ನ ತಾಯಿಗೆ 10 ಕೆಜಿಯಷ್ಟು ಅಕ್ಕಿ ಕೇಳಿದ್ದ, ಆಕೆ ನಿರಾಕರಿಸಿದಾಗ, ಅವನು ಕೊಡಲಿಯಿಂದ ಹಲ್ಲೆ ಮಾಡಿದ್ದ ಮತ್ತು ನಂತರ ಹರಿತವಾದ ಆಯುಧದಿಂದ ತನ್ನನ್ನು ತಾನೇ ಹಾನಿ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಗಂಡನನ್ನು ಕೊಂದು, ಜೇಬಿನಲ್ಲಿ 8 ವಯಾಗ್ರದ ಪ್ಯಾಕೆಟ್ ಇಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ಪೋಲೀಸರು ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸಂಬಂಧಿತ ವಿಭಾಗದ ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳು ಮುಂದುವರೆದಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ