AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ
ನಾಯಿ
ನಯನಾ ರಾಜೀವ್
|

Updated on: Oct 01, 2024 | 9:26 AM

Share

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಪಪ್ಪು ಮೊದಲು ನಾಯಿಗೆ ಕೋಲಿನಿಂದ ತಳಿಸಿದ್ದಾನೆ, ಬಳಿಕ ಬೆಂಕಿಗೆ ಹಾಕಿ ಸುಟ್ಟಿದ್ದಾನೆ, ಅಷ್ಟಾದರೂ ಅದು ಸಾಯದಿದ್ದಾಗ ನಾಯಿಯನ್ನು ಬೈಕ್​ನ ಹಿಂಬದಿಗೆ ಕಟ್ಟಿ ಎಳೆದೊಯ್ದು ರಸ್ತೆಯಲ್ಲಿ ಎಸೆದಿದ್ದಾನೆ. ಕೊನೆಯದಾಗಿ ಪಪ್ಪು ನಾಯಿಯ ತಲೆಯನ್ನು ದೊಡ್ಡ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಲಕ್ನೋದಲ್ಲಿ ಮತ್ತೊಂದು ಘಟನೆ ರಕ್ತ ಸುರಿಯುವಂತೆ ಬೀದಿ ನಾಯಿಯ ಮೇಲೆ ಹಲ್ಲೆ ಮಾಡಿದ ಪಾಪಿಗಳು ಬೊಗಳಿದ್ದಕ್ಕೆ ಬೀದಿ ನಾಯಿಯನ್ನು (Dog) ಥಳಿಸಿ ಕಾಲು ಮುರಿದಿರುವ  ಘಟನೆ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಮೂವರು ವ್ಯಕ್ತಿಗಳು ಮನೆಯ ಹೊರಗೆ ಬೀದಿ ನಾಯಿಗಳ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಾಯಿ ಥಳಿತದ ವಿಡಿಯೋ ಲಕ್ನೋದ ಸಾದತ್ಗಂಜ್ ಪ್ರದೇಶದಲ್ಲಿ ನಡೆದದ್ದು ಎನ್ನಲಾಗುತ್ತಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು ವಿಡಿಯೋ ಆಧರಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಮನೆಯೊಂದರ ಗೇಟ್ ಮುಂದೆ ಎರಡು ಶ್ವಾನಗಳು ವಿಶ್ರಾಂತಿ ಪಡೆಯುತ್ತಿದ್ದಾಗ ನಾಯಿಗಳ ಮೇಲೆ ಮೂವರು ವ್ಯಕ್ತಿಗಳು ದಾಳಿ ಮಾಡಿದ್ದಾರೆ. ದೊಣ್ಣೆಯಿಂದ ಥಳಿಸುತ್ತಿದ್ದಂತೆ ಅಲ್ಲಿದ್ದ ಎರಡು ನಾಯಿಗಳಲ್ಲಿ ಒಂದು ಥಳಿತದಿಂದ ಪಾರಾಗಿದೆ. ಮೂವರು ವ್ಯಕ್ತಿಗಳು ದಾಳಿ ನಡೆಸುತ್ತಿದ್ದಂತೆ ಒಂದು ಅಲ್ಲಿಂದ ಪರಾರಿಯಾಗಿದೆ. ಆದರೆ ಇನ್ನೊಂದು ಶ್ವಾನ ಈ ದುಷ್ಟರ ಕೈಗೆ ಸಿಕ್ಕಿಬಿದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ