AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ
ನಾಯಿ
ನಯನಾ ರಾಜೀವ್
|

Updated on: Oct 01, 2024 | 9:26 AM

Share

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಪಪ್ಪು ಮೊದಲು ನಾಯಿಗೆ ಕೋಲಿನಿಂದ ತಳಿಸಿದ್ದಾನೆ, ಬಳಿಕ ಬೆಂಕಿಗೆ ಹಾಕಿ ಸುಟ್ಟಿದ್ದಾನೆ, ಅಷ್ಟಾದರೂ ಅದು ಸಾಯದಿದ್ದಾಗ ನಾಯಿಯನ್ನು ಬೈಕ್​ನ ಹಿಂಬದಿಗೆ ಕಟ್ಟಿ ಎಳೆದೊಯ್ದು ರಸ್ತೆಯಲ್ಲಿ ಎಸೆದಿದ್ದಾನೆ. ಕೊನೆಯದಾಗಿ ಪಪ್ಪು ನಾಯಿಯ ತಲೆಯನ್ನು ದೊಡ್ಡ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಲಕ್ನೋದಲ್ಲಿ ಮತ್ತೊಂದು ಘಟನೆ ರಕ್ತ ಸುರಿಯುವಂತೆ ಬೀದಿ ನಾಯಿಯ ಮೇಲೆ ಹಲ್ಲೆ ಮಾಡಿದ ಪಾಪಿಗಳು ಬೊಗಳಿದ್ದಕ್ಕೆ ಬೀದಿ ನಾಯಿಯನ್ನು (Dog) ಥಳಿಸಿ ಕಾಲು ಮುರಿದಿರುವ  ಘಟನೆ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಮೂವರು ವ್ಯಕ್ತಿಗಳು ಮನೆಯ ಹೊರಗೆ ಬೀದಿ ನಾಯಿಗಳ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಾಯಿ ಥಳಿತದ ವಿಡಿಯೋ ಲಕ್ನೋದ ಸಾದತ್ಗಂಜ್ ಪ್ರದೇಶದಲ್ಲಿ ನಡೆದದ್ದು ಎನ್ನಲಾಗುತ್ತಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು ವಿಡಿಯೋ ಆಧರಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಮನೆಯೊಂದರ ಗೇಟ್ ಮುಂದೆ ಎರಡು ಶ್ವಾನಗಳು ವಿಶ್ರಾಂತಿ ಪಡೆಯುತ್ತಿದ್ದಾಗ ನಾಯಿಗಳ ಮೇಲೆ ಮೂವರು ವ್ಯಕ್ತಿಗಳು ದಾಳಿ ಮಾಡಿದ್ದಾರೆ. ದೊಣ್ಣೆಯಿಂದ ಥಳಿಸುತ್ತಿದ್ದಂತೆ ಅಲ್ಲಿದ್ದ ಎರಡು ನಾಯಿಗಳಲ್ಲಿ ಒಂದು ಥಳಿತದಿಂದ ಪಾರಾಗಿದೆ. ಮೂವರು ವ್ಯಕ್ತಿಗಳು ದಾಳಿ ನಡೆಸುತ್ತಿದ್ದಂತೆ ಒಂದು ಅಲ್ಲಿಂದ ಪರಾರಿಯಾಗಿದೆ. ಆದರೆ ಇನ್ನೊಂದು ಶ್ವಾನ ಈ ದುಷ್ಟರ ಕೈಗೆ ಸಿಕ್ಕಿಬಿದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್