AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ
ನಾಯಿ
ನಯನಾ ರಾಜೀವ್
|

Updated on: Oct 01, 2024 | 9:26 AM

Share

ತನ್ನ ಮಗಳಿಗೆ ಕಚ್ಚಿದ್ದ ನಾಯಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಆರೋಪಿಯನ್ನು ಪಪ್ಪು ಎಂದು ಗುರುತಿಸಲಾಗಿದ್ದು, ಸೇಡು ತೀರಿಸಿಕೊಳ್ಳಲು ಬೀದಿ ನಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾಯಿ ಕುತ್ತಿಗೆಗೆ ಹಗ್ಗ ಕಟ್ಟಿ ರಸ್ತೆಯ ತುಂಬೆಲ್ಲಾ ಬೈಕ್​ನಲ್ಲಿ ಹೋಗುತ್ತಾ ನಾಯಿಯನ್ನು ಧರ ಧರನೆ ಎಳೆದೊಯ್ದಿದ್ದಾರೆ.

ಪಪ್ಪು ಮೊದಲು ನಾಯಿಗೆ ಕೋಲಿನಿಂದ ತಳಿಸಿದ್ದಾನೆ, ಬಳಿಕ ಬೆಂಕಿಗೆ ಹಾಕಿ ಸುಟ್ಟಿದ್ದಾನೆ, ಅಷ್ಟಾದರೂ ಅದು ಸಾಯದಿದ್ದಾಗ ನಾಯಿಯನ್ನು ಬೈಕ್​ನ ಹಿಂಬದಿಗೆ ಕಟ್ಟಿ ಎಳೆದೊಯ್ದು ರಸ್ತೆಯಲ್ಲಿ ಎಸೆದಿದ್ದಾನೆ. ಕೊನೆಯದಾಗಿ ಪಪ್ಪು ನಾಯಿಯ ತಲೆಯನ್ನು ದೊಡ್ಡ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಲಕ್ನೋದಲ್ಲಿ ಮತ್ತೊಂದು ಘಟನೆ ರಕ್ತ ಸುರಿಯುವಂತೆ ಬೀದಿ ನಾಯಿಯ ಮೇಲೆ ಹಲ್ಲೆ ಮಾಡಿದ ಪಾಪಿಗಳು ಬೊಗಳಿದ್ದಕ್ಕೆ ಬೀದಿ ನಾಯಿಯನ್ನು (Dog) ಥಳಿಸಿ ಕಾಲು ಮುರಿದಿರುವ  ಘಟನೆ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಮೂವರು ವ್ಯಕ್ತಿಗಳು ಮನೆಯ ಹೊರಗೆ ಬೀದಿ ನಾಯಿಗಳ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಾಯಿ ಥಳಿತದ ವಿಡಿಯೋ ಲಕ್ನೋದ ಸಾದತ್ಗಂಜ್ ಪ್ರದೇಶದಲ್ಲಿ ನಡೆದದ್ದು ಎನ್ನಲಾಗುತ್ತಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು ವಿಡಿಯೋ ಆಧರಿಸಿ ಎಫ್ಐಆರ್ ದಾಖಲಿಸಿದ್ದಾರೆ.

ಮನೆಯೊಂದರ ಗೇಟ್ ಮುಂದೆ ಎರಡು ಶ್ವಾನಗಳು ವಿಶ್ರಾಂತಿ ಪಡೆಯುತ್ತಿದ್ದಾಗ ನಾಯಿಗಳ ಮೇಲೆ ಮೂವರು ವ್ಯಕ್ತಿಗಳು ದಾಳಿ ಮಾಡಿದ್ದಾರೆ. ದೊಣ್ಣೆಯಿಂದ ಥಳಿಸುತ್ತಿದ್ದಂತೆ ಅಲ್ಲಿದ್ದ ಎರಡು ನಾಯಿಗಳಲ್ಲಿ ಒಂದು ಥಳಿತದಿಂದ ಪಾರಾಗಿದೆ. ಮೂವರು ವ್ಯಕ್ತಿಗಳು ದಾಳಿ ನಡೆಸುತ್ತಿದ್ದಂತೆ ಒಂದು ಅಲ್ಲಿಂದ ಪರಾರಿಯಾಗಿದೆ. ಆದರೆ ಇನ್ನೊಂದು ಶ್ವಾನ ಈ ದುಷ್ಟರ ಕೈಗೆ ಸಿಕ್ಕಿಬಿದ್ದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!