Ghaziabad: ಕೋಪದಲ್ಲಿ ಪತ್ನಿ ಕೊಂದು 3 ದಿನಗಳ ಕಾಲ ಶವದ ಜತೆಯಲ್ಲೇ ಇದ್ದ ಪತಿ

ಕೋಪದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಶವದ ಜತೆ ಮೂರು ದಿನ ಕಳೆದ ಭರತ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ.

Ghaziabad: ಕೋಪದಲ್ಲಿ ಪತ್ನಿ ಕೊಂದು 3 ದಿನಗಳ ಕಾಲ ಶವದ ಜತೆಯಲ್ಲೇ ಇದ್ದ ಪತಿ
ಅಪರಾಧ
Updated By: ನಯನಾ ರಾಜೀವ್

Updated on: Mar 03, 2024 | 12:44 PM

ಕೋಪದಲ್ಲಿ ಪತ್ನಿಯನ್ನು ಕೊಂದು 3 ದಿನಗಳ ಕಾಲ ಶವದ ಜತೆಯೆಲ್ಲೇ ಇದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಫೆಬ್ರವರಿ 27ರಂದು ಘಟನೆ ನಡೆದಿದ್ದು, ಮಾರ್ಚ್​ 1ರಂದು ಬೆಳಕಿಗೆ ಬಂದಿದೆ, ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರು ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಮನೆಗೆ ಬಂದು ವಿಚಾರಣೆ ನಡೆಸಿದಾಗ ಕೋಣೆಯಲ್ಲಿ ಶವ ಪತ್ತೆಯಾಗಿತ್ತು. ಆರೋಪಿ ಭರತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಭರತ್ ಪತಿ ಜತೆ ಜಗಳವಾಡಿದ್ದ ಕೋಪದಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ, ಭರತ್ ಮೂರು ದಿನಗಳ ಕಾಲ ಶವದೊಂದಿಗೆ ಮನೆಯಲ್ಲಿಯೇ ಇದ್ದ. ಬಳಿಕ ಪತ್ನಿ ಸುನಿತಾಳ ದೇಹವನ್ನು ಹಾಸಿಗೆಯ ಮೇಲೆ ಮಲಗಿಸಿ ಶುಕ್ರವಾರವಷ್ಟೇ ಕೆಲಸಕ್ಕೆಂದು ಕಚೇರಿಗೆ ಹೋಗಿದ್ದ. ಶನಿವಾರ ಅಕ್ಕಪಕ್ಕದ ಮನೆಯವರು ಈ ಮನೆಯಿಂದ ವಾಸನೆ ಬರುತ್ತಿರುವುದನ್ನು ಪತ್ತೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುನಿತಾ ಅವರ ದೇಹವು ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ವ್ಯವಸ್ಥೆ ಮಾಡಿದರು. ಎರಡೂವರೆ ವರ್ಷಗಳ ಹಿಂದೆ ಅಧಿಕೃತವಾಗಿ ಮದುವೆಯಾಗುವ ಮೊದಲು ಇಬ್ಬರಿಗೂ ಬೇರೊಂದು ಮದುವೆಯಾಗಿತ್ತು.
ಭರತ್ ತನ್ನ ಮಾಜಿ ಪತ್ನಿಗೆ ನಿರಂತರ ಆರ್ಥಿಕ ಬೆಂಬಲ ನೀಡಿದ್ದರಿಂದ ಅವರ ಸಂಬಂಧದಲ್ಲಿ ತೊಡಕುಗಳು ಉದ್ಭವಿಸಿದವು, ಇದು ಅವನ ಮತ್ತು ಸುನೀತಾ ನಡುವೆ ಆಗಾಗ್ಗೆ ಭಿನ್ನಾಭಿಪ್ರಾಯಗಳಿಗೆ ಕಾರಣವಾಯಿತು. ಫೆಬ್ರವರಿ 27 ರಂದು ನಡೆದ ಮಾರಣಾಂತಿಕ ಘರ್ಷಣೆ ಮಹಿಳೆಯ ಕೊಲೆಯಲ್ಲಿ ಅಂತ್ಯಗೊಂಡಿತು.

ಮತ್ತಷ್ಟು ಓದಿ: ಪ್ರೀತಿಸುವ ಹಕ್ಕಿಲ್ಲವೇ?: ಕತಾರ್​ನಿಂದ ಉಳ್ಳಾಲ ಪೊಲೀಸರಿಗೆ ಸಂದೇಶ ರವಾನಿಸಿದ ನಾಪತ್ತೆಯಾದ ಚೈತ್ರಾ ಹೆಬ್ಬಾರ್

ಭರತ್ ಶುಕ್ರವಾರ ಮಾತ್ರ ತನ್ನ ಬಾಗಿಲಿಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದ. ಸುನೀತಾ ಅವರ ಕುಟುಂಬದ ದೂರಿನ ನಂತರ, ಅಧಿಕಾರಿಗಳು ಮಸೂರಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಭರತ್ ವಿರುದ್ಧ ಆರೋಪ ಹೊರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಪತ್ನಿಯನ್ನು ಕೊಂದ ಪತಿ
ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದ ಘಟನೆಯಲ್ಲಿ ರಾಜೇಶ್ ನಿಶಾದ್ ಎಂಬ ವ್ಯಕ್ತಿ ಮಕ್ಕಳಿಲ್ಲದ ಕಾರಣಕ್ಕೆ ಆಗಾಗ ಪತ್ನಿಯೊಂದಿಗೆ ಜಗಳವಾಡುತ್ತಿದ್ದ, ಚಾಕುವಿನಿಂದ ತನ್ನ ಪತ್ನಿ ಶಾನೋಳ ಕುತ್ತಿಗೆಯನ್ನು ಮಾರಣಾಂತಿಕವಾಗಿ ಸೀಳಿದ್ದಾನೆ.
ಕೃತ್ಯದ ನಂತರ ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ