AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಬೆಡ್​ರೂಂನಲ್ಲಿ ಬಚ್ಚಿಟ್ಟಿದ್ದ ವ್ಯಕ್ತಿಯ ಬಂಧನ

ಮದ್ಯದ ಅಮಲಿನಲ್ಲಿದ್ದ ಪತ್ನಿ ನಿಂದಿಸಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ಹತ್ಯೆ ಮಾಡಿ ಎರಡು ದಿನಗಳ ಕಾಲ ಬೆಡ್​ರೂಂನಲ್ಲಿಟ್ಟಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.

ಒಡಿಶಾ: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಬೆಡ್​ರೂಂನಲ್ಲಿ ಬಚ್ಚಿಟ್ಟಿದ್ದ ವ್ಯಕ್ತಿಯ ಬಂಧನ
ನಯನಾ ರಾಜೀವ್
|

Updated on: Mar 15, 2024 | 8:25 AM

Share

ಪತ್ನಿ ಮದ್ಯದ ಅಮಲಿನಲ್ಲಿ ನಿಂದಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಮಂಗಳವಾರ ಮೈತ್ರಿ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಣಿ ನಗರದ ಕೊಳೆಗೇರಿಯಲ್ಲಿ ನಡೆದ ಘಟನೆ ಇದು.

ವ್ಯಕ್ತಿ ಶವವನ್ನು ಕೋಣೆಯಲ್ಲಿ ಬಚ್ಚಿಟ್ಟು, ಎರಡು ದಿನಗಳ ಕಾಲ ಅದರೊಂದಿಗೆ ವಾಸಿಸುತ್ತಿದ್ದ, ಗುರುವಾರ ಮಗ ಶವವನ್ನು ಪತ್ತೆ ಮಾಡಿದ್ದ. ಗಂಜಾಂ ಮೂಲದ ವ್ಯಕ್ತಿ ತನ್ನ ಪತ್ನಿ ಮತ್ತು ಮೂವರು ಪುತ್ರರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಪತ್ನಿ ಮದ್ಯವ್ಯಸನಿಯಾಗಿದ್ದು, ಮಂಗಳವಾರ ಮಧ್ಯಾಹ್ನ ಕುಡಿದು ಬಂದು ಆತನನ್ನು ನಿಂದಿಸಲು ಆರಂಭಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿ ಆಕೆಯನ್ನು ಮರದ ಹಲಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಕೋಣೆಯೊಂದರಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದರು. ಗುರುವಾರ, ಅವರ ಹಿರಿಯ ಮಗ ಮನೆಗೆ ಬಂದಾಗ ಮಾಹಿತಿ ಸಿಕ್ಕಿತ್ತು. ಬಳಿಕ ಪೊಲೀಸರಿಗೆ ಈ ವಿಷಯ ತಿಳಿಸಿದ್ದ. ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕೋಪದಲ್ಲಿ ಪತ್ನಿ ಕೊಂದು 3 ದಿನಗಳ ಕಾಲ ಶವದ ಜತೆಯಲ್ಲೇ ಇದ್ದ ಪತಿ

ಮತ್ತೊಂದು ಘಟನೆ

ಪತ್ನಿ ಕೊಂದು 3 ದಿನಗಳ ಕಾಲ ಶವದ ಜತೆಯಲ್ಲೇ ಇದ್ದ ಪತಿ ಕೋಪದಲ್ಲಿ ಪತ್ನಿಯನ್ನು ಕೊಂದು 3 ದಿನಗಳ ಕಾಲ ಶವದ ಜತೆಯೆಲ್ಲೇ ಇದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಫೆಬ್ರವರಿ 27ರಂದು ಘಟನೆ ನಡೆದಿದ್ದು, ಮಾರ್ಚ್​ 1ರಂದು ಬೆಳಕಿಗೆ ಬಂದಿದೆ, ಮನೆಯಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರು ಮಾಹಿತಿ ನೀಡಿದ್ದರು.

ಬಳಿಕ ಪೊಲೀಸರು ಮನೆಗೆ ಬಂದು ವಿಚಾರಣೆ ನಡೆಸಿದಾಗ ಕೋಣೆಯಲ್ಲಿ ಶವ ಪತ್ತೆಯಾಗಿತ್ತು. ಆರೋಪಿ ಭರತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭರತ್ ಪತಿ ಜತೆ ಜಗಳವಾಡಿದ್ದ ಕೋಪದಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ, ಭರತ್ ಮೂರು ದಿನಗಳ ಕಾಲ ಶವದೊಂದಿಗೆ ಮನೆಯಲ್ಲಿಯೇ ಇದ್ದ.

ಬಳಿಕ ಪತ್ನಿ ಸುನಿತಾಳ ದೇಹವನ್ನು ಹಾಸಿಗೆಯ ಮೇಲೆ ಮಲಗಿಸಿ ಶುಕ್ರವಾರವಷ್ಟೇ ಕೆಲಸಕ್ಕೆಂದು ಕಚೇರಿಗೆ ಹೋಗಿದ್ದ. ಶನಿವಾರ ಅಕ್ಕಪಕ್ಕದ ಮನೆಯವರು ಈ ಮನೆಯಿಂದ ವಾಸನೆ ಬರುತ್ತಿರುವುದನ್ನು ಪತ್ತೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು