AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ 4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಕೂಲಿ ಕೆಲಸದವರ ಮಗಳಾದ 4 ವರ್ಷದ ಬಾಲಕಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
Child Abuse
ಸುಷ್ಮಾ ಚಕ್ರೆ
|

Updated on: Feb 21, 2026 | 11:07 PM

Share

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ರೆಕಾರ್ಡ್ ಆಗಿತ್ತು. ಆಕೆ ಆತನ ಕೈ ಹಿಡಿದುಕೊಂಡು ಹೋಗುತ್ತಿದ್ದಳು. ಆದರೆ, ಆತ ಯಾರೆಂದು ಆ ಮಗುವಿನ ಅಪ್ಪ-ಅಮ್ಮನಿಗೆ ಗೊತ್ತಿರಲಿಲ್ಲ. ಕೊನೆಗೂ ಆಕೆ ಸಿಕ್ಕಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆರೋಪಿಯು ಬಾಲಕಿಯನ್ನು ರೈಲ್ವೆ ನಿಲ್ದಾಣದ ಆವರಣದೊಳಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗು ನೀಡಿದ ವಿವರಣೆಯ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಗುರುತಿಸಿದರು. ಪೊಲೀಸರು ಈ ಘಟನೆ ನಡೆದ 4 ಗಂಟೆಗಳಲ್ಲಿ ಆತನನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ