AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ 4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ ಆ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಕೂಲಿ ಕೆಲಸದವರ ಮಗಳಾದ 4 ವರ್ಷದ ಬಾಲಕಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
Child Abuse
ಸುಷ್ಮಾ ಚಕ್ರೆ
|

Updated on: Feb 21, 2026 | 11:07 PM

Share

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ರೆಕಾರ್ಡ್ ಆಗಿತ್ತು. ಆಕೆ ಆತನ ಕೈ ಹಿಡಿದುಕೊಂಡು ಹೋಗುತ್ತಿದ್ದಳು. ಆದರೆ, ಆತ ಯಾರೆಂದು ಆ ಮಗುವಿನ ಅಪ್ಪ-ಅಮ್ಮನಿಗೆ ಗೊತ್ತಿರಲಿಲ್ಲ. ಕೊನೆಗೂ ಆಕೆ ಸಿಕ್ಕಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆರೋಪಿಯು ಬಾಲಕಿಯನ್ನು ರೈಲ್ವೆ ನಿಲ್ದಾಣದ ಆವರಣದೊಳಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗು ನೀಡಿದ ವಿವರಣೆಯ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಗುರುತಿಸಿದರು. ಪೊಲೀಸರು ಈ ಘಟನೆ ನಡೆದ 4 ಗಂಟೆಗಳಲ್ಲಿ ಆತನನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ