AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಗಢ: ಕಳ್ಳನೆಂದು ಭಾವಿಸಿ ಥಳಿಸಿ ವ್ಯಕ್ತಿಯ ಹತ್ಯೆ

ವ್ಯಕ್ತಿಯೊಬ್ಬನನ್ನು ಕಳ್ಳನೆಂದು ಭಾವಿಸಿ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.

ಅಲಿಗಢ: ಕಳ್ಳನೆಂದು ಭಾವಿಸಿ ಥಳಿಸಿ ವ್ಯಕ್ತಿಯ ಹತ್ಯೆ
ಪೊಲೀಸ್​Image Credit source: Hindustan Times
ನಯನಾ ರಾಜೀವ್
|

Updated on: Jun 20, 2024 | 8:17 AM

Share

ಕಳ್ಳತನದ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದೆ. ಇದೀಗ ಆ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿದ್ದು, ಹೆಚ್ಚುವರಿ ಪೊಲೀಸ್​ ಪಡೆಗಳನ್ನು ನಿಯೋಜಿಸಲಾಗಿದೆ. ಮಂಗಳವಾರ ರಾತ್ರಿ 10.15ರ ಸುಮಾರಿಗೆ ಮಾಮು ಭಂಜಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಘಾಸ್​ ಕಿ ಮಂಡಿ ಪ್ರದೇಶದ ನಿವಾಸಿ ಮೊಹಮ್ಮದ್ ಫರೀದ್​ ಅಲಿಯಾಸ್ ಔರಂಗಜೇಬ್ ಎಂದು ಗುರುತಿಸಲಾಗಿದೆ.

ಹಿಂದೂ ಮತ್ತು ಮುಸ್ಲಿಂ ಗುಂಪುಗಳು ಹಳೆಯ ನಗರದ ರೈಲ್ವೆ ನಿಲ್ದಾಣದ ರಸ್ತೆಯ ಕೆಲವು ಸ್ಥಳಗಳಲ್ಲಿ ಜಮಾಯಿಸಿದ್ದು, ಘಟನೆಯನ್ನು ವಿರೋಧಿಸಿ ಕೆಲವು ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಯಿತು. ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನಿಷ್ಠ ಆರು ಮಂದಿಯ ಗುಂಪೊಂದು ಫರೀದ್​ ಮೇಲೆ ಮನಬಂದಂತೆ ಹಲ್ಲೆ ನಡೆಸಿದೆ.

ಆರೋಪಿಗಳು ಕೊಲೆಯಾದ ವ್ಯಕ್ತಿಯ ನೆರೆಹೊರೆಯವರೇ ಆಗಿದ್ದಾರೆ, ಅವರನ್ನು ಮೋಹಿತ್, ರಾಹುಲ್, ಚಿರಾಗ್, ಅಂಕಿತ್, ಕಮಲ್ ಎಂದು ಗುರುತಿಸಲಾಗಿದೆ. ಸ್ಥಳೀಯ ವ್ಯಪಾರಿ ಮುಖೇಶ್​ ಚಂದ್ ಮಿತ್ತಲ್ ಎಂಬುವವರ ಮನೆಗೆ ಔರಂಗಜೇಬ್ ನುಗ್ಗಿದ್ದಾನೆಂದು ಆರೋಪಿಸಿ ಆತನನ್ನು ಆ ಮನೆಯವರು ಹಾಗೂ ನೆರೆಹೊರೆಯವರು ಬರ್ಬರವಾಗಿ ಥಳಿಸಿ ಹತ್ಯೆಮಾಡಿದ್ದಾರೆ.

ಮತ್ತಷ್ಟು ಓದಿ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ

ಮೃತನ ಸಹೋದರ ಮೊಹಮ್ಮದ್ ನೀಡಿದ ದೂರಿನ ಮೇಲೆ ಪೊಲೀಸರು ಆರು ಮಂದಿ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಅಲಿಗಢ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂಜೀವ್ ಸುಮನ್, ಇತರ ಹಿರಿಯ ಅಧಿಕಾರಿಗಳೊಂದಿಗೆ ಮಾಮು ಭಂಜಾ ಪ್ರದೇಶದಲ್ಲಿ ಎರಡೂ ಕಡೆಯವರೊಂದಿಗೆ ಮಾತುಕತೆ ನಡೆಸುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮಂಗಳವಾರ ತಡರಾತ್ರಿ ಗಾಂಧಿ ಪಾರ್ಕ್ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತ್ತು, ಸ್ಥಳಕ್ಕಾಗಮಿಸಿದಾಗ, ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳ ಮನೆಗೆ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದ್ದಾನೆ ಎಂದು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ನಂತರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಮೃತರ ಅಂತಿಮ ವಿಧಿಗಳನ್ನು ನಡೆಸಲಾಯಿತು ಎಂದು ಸುಮನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ