AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ತಂದೆಯಿಂದ ಹಣ ವಸೂಲಿ ಮಾಡಲು, ಕಿಡ್ನ್ಯಾಪ್​ ಆಗಿದ್ದೇನೆಂದು ನಾಟಕವಾಡಿ ಸಿಕ್ಕಿಬಿದ್ದ ಮಗ

ತಂದೆಯಿಂದ ಹಣ ಪಡೆಯಲು ಮಗನೊಬ್ಬ ತಾನು ಕಿಡ್ನ್ಯಾಪ್​ ಆಗಿದ್ದೇನೆ ಎಂದು ನಾಟಕವಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ವಸಾಯಿಯ ಫಾದರ್ವಾಡಿ ಪ್ರದೇಶದ ನಿವಾಸಿಯೊಬ್ಬರು ತಮ್ಮ ಮಗ ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋಗಿದ್ದ ಆದರೆ ಹಿಂತಿರುಗಿಲ್ಲ ಎಂದು ಇಲ್ಲಿನ ವಲಿವ್ ಪೊಲೀಸರಿಗೆ ದೂರು ನೀಡಿದ್ದರು.

ಮಹಾರಾಷ್ಟ್ರ: ತಂದೆಯಿಂದ ಹಣ ವಸೂಲಿ ಮಾಡಲು, ಕಿಡ್ನ್ಯಾಪ್​ ಆಗಿದ್ದೇನೆಂದು ನಾಟಕವಾಡಿ ಸಿಕ್ಕಿಬಿದ್ದ ಮಗ
ಅಪಹರಣImage Credit source: NDTV
ನಯನಾ ರಾಜೀವ್
|

Updated on: Dec 10, 2023 | 9:51 AM

Share

ತಂದೆಯಿಂದ ಹಣ ಪಡೆಯಲು ಮಗನೊಬ್ಬ ತಾನು ಕಿಡ್ನ್ಯಾಪ್​ ಆಗಿದ್ದೇನೆ ಎಂದು ನಾಟಕವಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ವಸಾಯಿಯ ಫಾದರ್ವಾಡಿ ಪ್ರದೇಶದ ನಿವಾಸಿಯೊಬ್ಬರು ತಮ್ಮ ಮಗ ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋಗಿದ್ದ ಆದರೆ ಹಿಂತಿರುಗಿಲ್ಲ ಎಂದು ಇಲ್ಲಿನ ವಲಿವ್ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಡಿಸೆಂಬರ್ 8 ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅದರ ಬಗ್ಗೆ ತನಿಖೆ ನಡೆಸುತ್ತಿರುವಾಗ, ದೂರುದಾರರಿಗೆ ಅವರ ಮಗನಿಂದ ಕರೆ ಬಂದಿತ್ತು. ಮೂವರು ವ್ಯಕ್ತಿಗಳು ತನ್ನನ್ನು ಅಪಹರಿಸಿ, ಸೆರೆಯಲ್ಲಿಟ್ಟಿದ್ದಾರೆ, 30 ಸಾವಿರ ಕೊಟ್ಟಿಲ್ಲವೆಂದರೆ ನನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದ.

ಹಣ ಕಳುಹಿಸಲು ಮಗ ತನ್ನ ತಂದೆಗೆ ಕ್ಯೂಆರ್ ಕೋಡ್ ಅನ್ನು ಸಹ ಕಳುಹಿಸಿದ್ದ. ನಂತರ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಯಿತು ಮತ್ತು ಅವರು ವಸೈ, ವಿರಾರ್, ನಲ್ಲಸೊಪಾರ ಮತ್ತು ಇತರ ಸ್ಥಳಗಳಲ್ಲಿ ಹುಡುಕಾಟ ಆರಂಭಿಸಿದರು.

ಮತ್ತಷ್ಟು ಓದಿ: ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ, ಕಬಾಬ್ ತರುತ್ತೇನೆಂದು ಹೋದವ ಹೆಣವಾಗಿ ಪತ್ತೆ

ಯುವಕನನ್ನು ಶನಿವಾರ ವಸಾಯಿ ಫಾಟಾದಲ್ಲಿ ಪತ್ತೆ ಮಾಡಲಾಯಿತು. ಪೊಲೀಸರು ಆತನನ್ನು ವಿಚಾರಿಸಿದಾಗ ತಂದೆಯಿಂದ ಹಣ ಬೇಕೆಂದು ಕೇಳಿದ್ದೆ, ಆದರೆ ತಂದೆ ಕೊಡಲು ಒಪ್ಪಿರಲಿಲ್ಲ, ಹೀಗಾಗಿ ಆತ ತನ್ನ ತಂದೆಯಿಂದ ಹಣ ವಸೂಲಿ ಮಾಡಲು ಅಪಹರಣ ನಾಟಕವನ್ನು ರೂಪಿಸಿದ್ದಾಗಿ ತಿಳಿಸಿದ್ದಾನೆ. 20 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ