AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ತಂದೆಯಿಂದ ಹಣ ವಸೂಲಿ ಮಾಡಲು, ಕಿಡ್ನ್ಯಾಪ್​ ಆಗಿದ್ದೇನೆಂದು ನಾಟಕವಾಡಿ ಸಿಕ್ಕಿಬಿದ್ದ ಮಗ

ತಂದೆಯಿಂದ ಹಣ ಪಡೆಯಲು ಮಗನೊಬ್ಬ ತಾನು ಕಿಡ್ನ್ಯಾಪ್​ ಆಗಿದ್ದೇನೆ ಎಂದು ನಾಟಕವಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ವಸಾಯಿಯ ಫಾದರ್ವಾಡಿ ಪ್ರದೇಶದ ನಿವಾಸಿಯೊಬ್ಬರು ತಮ್ಮ ಮಗ ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋಗಿದ್ದ ಆದರೆ ಹಿಂತಿರುಗಿಲ್ಲ ಎಂದು ಇಲ್ಲಿನ ವಲಿವ್ ಪೊಲೀಸರಿಗೆ ದೂರು ನೀಡಿದ್ದರು.

ಮಹಾರಾಷ್ಟ್ರ: ತಂದೆಯಿಂದ ಹಣ ವಸೂಲಿ ಮಾಡಲು, ಕಿಡ್ನ್ಯಾಪ್​ ಆಗಿದ್ದೇನೆಂದು ನಾಟಕವಾಡಿ ಸಿಕ್ಕಿಬಿದ್ದ ಮಗ
ಅಪಹರಣImage Credit source: NDTV
ನಯನಾ ರಾಜೀವ್
|

Updated on: Dec 10, 2023 | 9:51 AM

Share

ತಂದೆಯಿಂದ ಹಣ ಪಡೆಯಲು ಮಗನೊಬ್ಬ ತಾನು ಕಿಡ್ನ್ಯಾಪ್​ ಆಗಿದ್ದೇನೆ ಎಂದು ನಾಟಕವಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ. ವಸಾಯಿಯ ಫಾದರ್ವಾಡಿ ಪ್ರದೇಶದ ನಿವಾಸಿಯೊಬ್ಬರು ತಮ್ಮ ಮಗ ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋಗಿದ್ದ ಆದರೆ ಹಿಂತಿರುಗಿಲ್ಲ ಎಂದು ಇಲ್ಲಿನ ವಲಿವ್ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಡಿಸೆಂಬರ್ 8 ರಂದು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಅದರ ಬಗ್ಗೆ ತನಿಖೆ ನಡೆಸುತ್ತಿರುವಾಗ, ದೂರುದಾರರಿಗೆ ಅವರ ಮಗನಿಂದ ಕರೆ ಬಂದಿತ್ತು. ಮೂವರು ವ್ಯಕ್ತಿಗಳು ತನ್ನನ್ನು ಅಪಹರಿಸಿ, ಸೆರೆಯಲ್ಲಿಟ್ಟಿದ್ದಾರೆ, 30 ಸಾವಿರ ಕೊಟ್ಟಿಲ್ಲವೆಂದರೆ ನನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದ.

ಹಣ ಕಳುಹಿಸಲು ಮಗ ತನ್ನ ತಂದೆಗೆ ಕ್ಯೂಆರ್ ಕೋಡ್ ಅನ್ನು ಸಹ ಕಳುಹಿಸಿದ್ದ. ನಂತರ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಯಿತು ಮತ್ತು ಅವರು ವಸೈ, ವಿರಾರ್, ನಲ್ಲಸೊಪಾರ ಮತ್ತು ಇತರ ಸ್ಥಳಗಳಲ್ಲಿ ಹುಡುಕಾಟ ಆರಂಭಿಸಿದರು.

ಮತ್ತಷ್ಟು ಓದಿ: ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ, ಕಬಾಬ್ ತರುತ್ತೇನೆಂದು ಹೋದವ ಹೆಣವಾಗಿ ಪತ್ತೆ

ಯುವಕನನ್ನು ಶನಿವಾರ ವಸಾಯಿ ಫಾಟಾದಲ್ಲಿ ಪತ್ತೆ ಮಾಡಲಾಯಿತು. ಪೊಲೀಸರು ಆತನನ್ನು ವಿಚಾರಿಸಿದಾಗ ತಂದೆಯಿಂದ ಹಣ ಬೇಕೆಂದು ಕೇಳಿದ್ದೆ, ಆದರೆ ತಂದೆ ಕೊಡಲು ಒಪ್ಪಿರಲಿಲ್ಲ, ಹೀಗಾಗಿ ಆತ ತನ್ನ ತಂದೆಯಿಂದ ಹಣ ವಸೂಲಿ ಮಾಡಲು ಅಪಹರಣ ನಾಟಕವನ್ನು ರೂಪಿಸಿದ್ದಾಗಿ ತಿಳಿಸಿದ್ದಾನೆ. 20 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ