ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ

ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ ಜಿಲ್ಲೆಯ ಉಮ್ರಿ ಗ್ರಾಮಕ್ಕೆ ಬಂದಿದ್ದರು.

ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ
ಮೊಸಳೆ ದಾಳಿಗೆ ಬಲಿಯಾದ ವ್ಯಕ್ತಿ
Image Credit source: India Today

Updated on: May 21, 2026 | 12:37 PM

ಲಕ್ನೋ, ಮೇ 21: ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ ಜಿಲ್ಲೆಯ ಉಮ್ರಿ ಗ್ರಾಮಕ್ಕೆ ಬಂದಿದ್ದರು.

ನದಿಯ ದಡದಲ್ಲಿ ಅಂತ್ಯಕ್ರಿಯೆಯ ಚಿತೆಯನ್ನು ಸಿದ್ಧಪಡಿಸಲು ಸಹಾಯ ಮಾಡಿದ ನಂತರ, ಅವರು ಸ್ನಾನ ಮಾಡಲು ಸರಯು ನದಿಗೆ ಇಳಿದಿದ್ದಾರೆ. ಅವರು ನೀರಿನಲ್ಲಿದ್ದಾಗ ಹಠಾತ್ ಆಗಿ ಬಂದ ದೊಡ್ಡ ಮೊಸಳೆಯೊಂದು, ದೀಪಕ್ ಅವರ ತಲೆಯನ್ನು ತನ್ನ ಬಲವಾದ ದವಡೆಗಳಿಂದ ಕಚ್ಚಿ ಹಿಡಿದು ಕೆಲವೇ ಸೆಕೆಂಡುಗಳಲ್ಲಿ ನದಿಯೊಳಗೆ ಎಳೆದೊಯ್ದಿದೆ.

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಸ್ಥಳೀಯರು ನದಿಯಲ್ಲಿ ಮೊಸಳೆಗಳ ಕಾಟ ಇರುವುದರಿಂದ ನೀರಿಗೆ ಇಳಿಯದಂತೆ ದೀಪಕ್ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಅವರು ಈ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿ ನೀರಿಗೆ ಇಳಿದಿದ್ದೇ ದುರಂತಕ್ಕೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿ ರಾಜೇಶ್ ಶುಕ್ಲಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದೀಪಕ್ ಅವರ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣವೇ ನದಿಯಲ್ಲಿ ಹುಡುಕಾಟ ನಡೆಸಿದರೂ ಅವರ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಧಾವಿಸಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಲಕ್ನೋದಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವನ್ನು ಕರೆಯಿಸಲಾಗಿದೆ. ಇಡೀ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಯುವಕನ ದೇಹಕ್ಕಾಗಿ ನದಿಯ ದಡದಲ್ಲಿ ಕಣ್ಣೀರು ಹಾಕುತ್ತಾ ಕಾಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us