ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆಕ್ರೋಶ

ದೆಹಲಿಯಲ್ಲಿ ಮುಂಜಾನೆ ವಾಕಿಂಗ್ ಮುಗಿಸಿ ವಾಪಾಸ್ ಬರುತ್ತಿದ್ದ ವ್ಯಕ್ತಿಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. 52 ವರ್ಷದ ವ್ಯಕ್ತಿಗೆ ಬೈಕ್​ನಲ್ಲಿ ಬಂದ ಇಬ್ಬರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಬಿಜೆಪಿ ವಿರುದ್ಧ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಆಕ್ರೋಶ ಹೊರಹಾಕಿದ್ದಾರೆ.

ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆಕ್ರೋಶ
ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ಶಹದಾರದಲ್ಲಿ ಗುಂಡಿಕ್ಕಿ ಹತ್ಯೆ
Follow us
ಸುಷ್ಮಾ ಚಕ್ರೆ
|

Updated on: Dec 07, 2024 | 3:12 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಮತ್ತೊಂದು ಪ್ರಕರಣ ನಡೆದಿದೆ. ವ್ಯಕ್ತಿಯೊಬ್ಬರು ಬೆಳಗಿನ ವಾಕ್ ಮುಗಿಸಿ ಹಿಂತಿರುಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಇದಾದ ನಂತರ ಶಹಾದಾರ ಪ್ರದೇಶದಲ್ಲಿ ವ್ಯಕ್ತಿಯೊಬ್ಬನಿಗೆ ಗುಂಡೇಟಿನಿಂದ ಗಾಯಗಳಾಗಿವೆ. ನಂತರ ಆತ ಮೃತಪಟ್ಟಿದ್ದು, ಅವರನ್ನು ಕೃಷ್ಣನಗರದ 52 ವರ್ಷದ ಸುನಿಲ್ ಜೈನ್ ಎಂದು ಗುರುತಿಸಲಾಗಿದೆ.

ಆರಂಭಿಕ ವರದಿಗಳ ಪ್ರಕಾರ, ಸುನಿಲ್ ಜೈನ್ ಪಾತ್ರೆಗಳನ್ನು ಮಾರುವ ಉದ್ಯಮಿ. ಸ್ಥಳಕ್ಕೆ ಕ್ರೈಂ ತಂಡವನ್ನು ಕರೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಫರ್ಶ್ ಬಜಾರ್ ಪಿಎಸ್ ಪ್ರದೇಶದಲ್ಲಿ ಸುನಿಲ್ ಜೈನ್ ಎಂಬ ವ್ಯಕ್ತಿ ಗುಂಡೇಟಿನಿಂದ ಗಾಯಗೊಂಡಿದ್ದು, ಬೈಕ್​ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಆ ಸ್ಥಳಕ್ಕೆ ಅಪರಾಧ ತಂಡವನ್ನು ಕರೆಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಕಿವಿಮಾತು: ಪಾಠಕ್​ ಶಿಸ್ತಿನ ಪಾಠ

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಫಲವಾದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಗೃಹ ಸಚಿವಾಲಯವನ್ನು ಟೀಕಿಸಿದ್ದಾರೆ. ಅಮಿತ್ ಶಾ ದೆಹಲಿಯನ್ನು ಹಾಳು ಮಾಡಿದ್ದಾರೆ, ದೆಹಲಿಯನ್ನು ಜಂಗಲ್ ರಾಜ್ ಆಗಿ ಮಾಡಿದ್ದಾರೆ, ಜನರು ಎಲ್ಲೆಡೆ ಭಯಭೀತರಾಗಿ ಬದುಕುತ್ತಿದ್ದಾರೆ. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ, ದೆಹಲಿಯ ಜನರು ಒಗ್ಗೂಡಬೇಕು. ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ