AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ

ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ವ್ಯಕ್ತಿಗೆ ತುಂಬಾ ದಿನಗಳಿಂದ ಹೊಟ್ಟೆ ನೋವು ಬರುತ್ತಿತ್ತು, ಹಲವು ವೈದ್ಯರನ್ನು ಸಂಪರ್ಕಿಸಿದರೂ ಸಮಸ್ಯೆ ಪರಿಹಾರವಾಗದಿದ್ದಾಗ ತನಗೆ ತಾನೇ ಸರ್ಜರಿ ಮಾಡಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಿದ್ದ.

ಉತ್ತರ ಪ್ರದೇಶ: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿ
ಶಸ್ತ್ರಚಿಕಿತ್ಸೆ ಮಾಡಿಕೊಂಡ ವ್ಯಕ್ತಿ Image Credit source: News 18
ನಯನಾ ರಾಜೀವ್
|

Updated on: Mar 21, 2025 | 11:09 AM

Share

ಮಥುರಾ, ಮಾರ್ಚ್​ 21: ಯೂಟ್ಯೂಬ್​ ನೋಡಿ ಸರ್ಜರಿ ಮಾಡಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ವ್ಯಕ್ತಿಗೆ ತುಂಬಾ ದಿನಗಳಿಂದ ಹೊಟ್ಟೆ ನೋವು ಬರುತ್ತಿತ್ತು, ಹಲವು ವೈದ್ಯರನ್ನು ಸಂಪರ್ಕಿಸಿದರೂ ಸಮಸ್ಯೆ ಪರಿಹಾರವಾಗದಿದ್ದಾಗ ತನಗೆ ತಾನೇ ಸರ್ಜರಿ ಮಾಡಿಕೊಳ್ಳುವುದು ಸೂಕ್ತ ಎಂದು ನಿರ್ಧರಿಸಿದ್ದ. ಯೂಟ್ಯೂಬ್‌ನಲ್ಲಿ ಹಲವಾರು ವೀಡಿಯೊಗಳನ್ನು ನೋಡಿದ ನಂತರ, ಔಷಧ ಅಂಗಡಿಯಿಂದ ಔಷಧಿಗಳನ್ನು ಖರೀದಿ ಮಾಡಿದ್ದ.

ನಂತರ ಯೂಟ್ಯೂಬ್​ನಲ್ಲಿ ನೋಡಿದ ಆಧಾರದ ಮೇಲೆ ಸ್ವತಃ ಶಸ್ತ್ರಚಿಕಿತ್ಸೆಗೆ ಪ್ರಯತ್ನಿಸಿದ್ದು ಅವರ ಸ್ಥಿತಿ ಹದಗೆಟ್ಟಾಗ, ಅವರ ಕುಟುಂಬವು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿತು.

ರಾಜಾ ಬಾಬು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯರನ್ನು ಸಂಪರ್ಕಿಸಿದ ನಂತರವೂ ಅವರ ನೋವು ಕಡಿಮೆಯಾಗಲಿಲ್ಲ. ನೋವು ಅಸಹನೀಯವಾದಾಗ, ಅವರು ಮಥುರಾಗೆ ಹೋಗಿ ಶಸ್ತ್ರಚಿಕಿತ್ಸಾ ಬ್ಲೇಡ್, ಹೊಲಿಗೆ ಸಾಮಗ್ರಿಗಳು ಮತ್ತು ಅರಿವಳಿಕೆ ಇಂಜೆಕ್ಷನ್‌ಗಳನ್ನು ಖರೀದಿಸಿದ್ದ. ಬುಧವಾರ ತಮ್ಮ ಕೋಣೆಯಲ್ಲಿ ಕುಳಿತು ಶಸ್ತ್ರ ಚಿಕಿತ್ಸೆ ಮಾಡಲು ಪ್ರಾರಂಭಿಸಿದ್ದ.

ಸ್ವಲ್ಪ ಸಮಯದ ಬಳಿಕ ಅರವಳಿಕೆ ಪರಿಣಾಮ ಕಡಿಮೆಯಾದಾಗ ತೀವ್ರ ನೋವು ಶುರುವಾಗಿ ಅರಚಲಾರಂಭಿಸಿದ್ದರು. ಕೂಡಲೇ ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ರಾಜಾ ಬಾಬು ಅವರಿಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ಎಂದು ಮನೆಯವರು ಹೇಳಿದ್ದಾರೆ.

ಮತ್ತಷ್ಟು ಓದಿ: ಇದು ನನ್ನ ಪತ್ನಿಗೆ ಪ್ರೀತಿಯ ಉಡುಗೊರೆ; ತನಗೆ ತಾನೇ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ

ಕಳೆದ ಕೆಲವು ದಿನಗಳಿಂದ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಮತ್ತು ಹಲವಾರು ವೈದ್ಯರನ್ನು ಸಂಪರ್ಕಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ. ಆಗ ರಾಜಾ ಬಾಬು ಸ್ವತಃ ಚಿಕಿತ್ಸೆ ಪಡೆಯಲು ನಿರ್ಧರಿಸಿದರು.

ಆದರೆ, ಅವರ ಸ್ಥಿತಿ ಹದಗೆಟ್ಟಂತೆ, ಹೆಚ್ಚಿನ ಚಿಕಿತ್ಸೆಗಾಗಿ ರಾಜಾ ಬಾಬು ಅವರನ್ನು ಆಗ್ರಾದ ಎಸ್‌ಎನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್