AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 90,000 ರೂ. ದಂಡ ವಿಧಿಸಲಾಗಿದೆ ಎಂದು ಚೆನ್ನೈನ ಮಹಿಳಾ ನ್ಯಾಯಾಲಯವು ತಿಳಿಸಿದೆ. ಅಪರಾಧಿ ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕು ಎಂದು ನ್ಯಾಯಾಧೀಶೆ ಎಂ ರಾಜಲಕ್ಷ್ಮಿ ಹೇಳಿದರು.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
ಜ್ಞಾನಶೇಖರನ್
ನಯನಾ ರಾಜೀವ್
|

Updated on:Jun 02, 2025 | 12:57 PM

Share

ಚೆನ್ನೈ, ಜೂನ್ 02: ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿ ಜ್ಞಾನಶೇಖರನ್​​ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಚೆನ್ನೈನ ಮಹಿಳಾ ನ್ಯಾಯಾಲಯವು 90,000 ರೂ. ದಂಡ ವಿಧಿಸಿದೆ.

30 ವರ್ಷ ಜೈಲಿನಲ್ಲಿ ಇರಬೇಕಾಗುತ್ತದೆ: ನ್ಯಾಯಾಲಯ ನ್ಯಾಯಾಧೀಶೆ ಎಂ ರಾಜಲಕ್ಚ್ಮೀ ಅಪರಾಧಿ ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಬೆದರಿಕೆ ಮತ್ತು ಅಪಹರಣ ಸೇರಿದಂತೆ ಎಲ್ಲಾ 11 ಆರೋಪಗಳಲ್ಲಿ ಜ್ಞಾನಶೇಖರನ್ ತಪ್ಪಿತಸ್ಥನೆಂದು ನ್ಯಾಯಾಧೀಶರು ಕಳೆದ ವಾರ ತೀರ್ಪು ನೀಡಿದ್ದರು. ಪ್ರಕರಣದಲ್ಲಿ ಕನಿಷ್ಠ 29 ಸಾಕ್ಷಿಗಳು ಸಾಕ್ಷ್ಯ ನುಡಿದಿದ್ದು, ಪೊಲೀಸರು 100 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ.

ಈ ಘಟನೆ ಕಳೆದ ವರ್ಷ(2024) ಡಿಸೆಂಬರ್ 23 ರಂದು ನಡೆದಿದ್ದು, ಜ್ಞಾನಶೇಖರನ್ ವಿಶ್ವವಿದ್ಯಾಲಯಕ್ಕೆ ಹೋಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಆವರಣದಲ್ಲಿದ್ದಳು. ಜ್ಞಾನಶೇಖರನ್ ವಿದ್ಯಾರ್ಥಿಯ ಸ್ನೇಹಿತನನ್ನು ಥಳಿಸಿ, ಆಕೆಯ ಮೇಲೂ ಹಲ್ಲೆ ನಡೆಸಿದ್ದ. ಆಕೆಯನ್ನು ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದ ಘಟನೆಯ ವಿಡಿಯೋ ಕೂಡ ಮಾಡಿದ್ದ. ಅದೇ ದಿನ ಆತನನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು

ತನ್ನ ವೃದ್ಧ ತಾಯಿ ಮತ್ತು ಎಂಟು ವರ್ಷದ ಮಗಳನ್ನು ನೋಡಿಕೊಳ್ಳಲು ಮನೆಯಲ್ಲಿಯೇ ಇರಬೇಕಾದ ಅಗತ್ಯವನ್ನು ಉಲ್ಲೇಖಿಸಿ ಕನಿಷ್ಠ ಶಿಕ್ಷೆಗಾಗಿ ಅವನು ಈ ಹಿಂದೆ ಮನವಿ ಮಾಡಿದ್ದನು. ಆದರೆ ಎಲ್ಲಾ ಆರೋಪಗಳಲ್ಲಿ ಅವನ ದೋಷ ಸಾಬೀತಾಗಿರುವುದರಿಂದ, ಅವನಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದರು.

ವಿಚಾರಣೆಯ ಸಮಯದಲ್ಲಿ, ಅಪರಾಧಿಯು ಚೆನ್ನೈನ ಹಲವಾರು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ, ಆತನಿಂದ 100 ಕ್ಕೂ ಹೆಚ್ಚು ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್ಯುವಿಯನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಆಡಳಿತಾರೂಢ ಡಿಎಂಕೆಯನ್ನು ಗುರಿಯಾಗಿಸಲು ಈ ಲೈಂಗಿಕ ದೌರ್ಜನ್ಯ ಪ್ರಕರಣವು ವಿರೋಧ ಪಕ್ಷದ ಎಐಎಡಿಎಂಕೆಗೆ ಹೊಸ ಶಸ್ತ್ರಾಸ್ತ್ರವನ್ನು ನೀಡಿತು. ಆಗ ಡಿಎಂಕೆ ತನಿಖೆಯನ್ನು ತ್ವರಿತಗೊಳಿಸಿ ನ್ಯಾಯವನ್ನು ಖಚಿತಪಡಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿತ್ತು.

ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಣ್ಣಿಸಿದ್ದ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ. ಅಣ್ಣಾಮಲೈ, ಘಟನೆಯ ಸಾಂಕೇತಿಕ ಕೃತ್ಯದಲ್ಲಿ ಸಾರ್ವಜನಿಕವಾಗಿ ತಮ್ಮನ್ನು ತಾವೇ ಛಡಿಯೇಟು ಹಾಕಿಕೊಂಡಿದ್ದರು.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:52 pm, Mon, 2 June 25

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?