ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 90,000 ರೂ. ದಂಡ ವಿಧಿಸಲಾಗಿದೆ ಎಂದು ಚೆನ್ನೈನ ಮಹಿಳಾ ನ್ಯಾಯಾಲಯವು ತಿಳಿಸಿದೆ. ಅಪರಾಧಿ ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕು ಎಂದು ನ್ಯಾಯಾಧೀಶೆ ಎಂ ರಾಜಲಕ್ಷ್ಮಿ ಹೇಳಿದರು.

ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ
ಜ್ಞಾನಶೇಖರನ್

Updated on: Jun 02, 2025 | 12:57 PM

ಚೆನ್ನೈ, ಜೂನ್ 02: ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿ ಜ್ಞಾನಶೇಖರನ್​​ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಚೆನ್ನೈನ ಮಹಿಳಾ ನ್ಯಾಯಾಲಯವು 90,000 ರೂ. ದಂಡ ವಿಧಿಸಿದೆ.

30 ವರ್ಷ ಜೈಲಿನಲ್ಲಿ ಇರಬೇಕಾಗುತ್ತದೆ: ನ್ಯಾಯಾಲಯ
ನ್ಯಾಯಾಧೀಶೆ ಎಂ ರಾಜಲಕ್ಚ್ಮೀ ಅಪರಾಧಿ ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಬೆದರಿಕೆ ಮತ್ತು ಅಪಹರಣ ಸೇರಿದಂತೆ ಎಲ್ಲಾ 11 ಆರೋಪಗಳಲ್ಲಿ ಜ್ಞಾನಶೇಖರನ್ ತಪ್ಪಿತಸ್ಥನೆಂದು ನ್ಯಾಯಾಧೀಶರು ಕಳೆದ ವಾರ ತೀರ್ಪು ನೀಡಿದ್ದರು. ಪ್ರಕರಣದಲ್ಲಿ ಕನಿಷ್ಠ 29 ಸಾಕ್ಷಿಗಳು ಸಾಕ್ಷ್ಯ ನುಡಿದಿದ್ದು, ಪೊಲೀಸರು 100 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ.

ಈ ಘಟನೆ ಕಳೆದ ವರ್ಷ(2024) ಡಿಸೆಂಬರ್ 23 ರಂದು ನಡೆದಿದ್ದು, ಜ್ಞಾನಶೇಖರನ್ ವಿಶ್ವವಿದ್ಯಾಲಯಕ್ಕೆ ಹೋಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಆವರಣದಲ್ಲಿದ್ದಳು. ಜ್ಞಾನಶೇಖರನ್ ವಿದ್ಯಾರ್ಥಿಯ ಸ್ನೇಹಿತನನ್ನು ಥಳಿಸಿ, ಆಕೆಯ ಮೇಲೂ ಹಲ್ಲೆ ನಡೆಸಿದ್ದ. ಆಕೆಯನ್ನು ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದ ಘಟನೆಯ ವಿಡಿಯೋ ಕೂಡ ಮಾಡಿದ್ದ. ಅದೇ ದಿನ ಆತನನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು

ತನ್ನ ವೃದ್ಧ ತಾಯಿ ಮತ್ತು ಎಂಟು ವರ್ಷದ ಮಗಳನ್ನು ನೋಡಿಕೊಳ್ಳಲು ಮನೆಯಲ್ಲಿಯೇ ಇರಬೇಕಾದ ಅಗತ್ಯವನ್ನು ಉಲ್ಲೇಖಿಸಿ ಕನಿಷ್ಠ ಶಿಕ್ಷೆಗಾಗಿ ಅವನು ಈ ಹಿಂದೆ ಮನವಿ ಮಾಡಿದ್ದನು. ಆದರೆ ಎಲ್ಲಾ ಆರೋಪಗಳಲ್ಲಿ ಅವನ ದೋಷ ಸಾಬೀತಾಗಿರುವುದರಿಂದ, ಅವನಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದರು.

ವಿಚಾರಣೆಯ ಸಮಯದಲ್ಲಿ, ಅಪರಾಧಿಯು ಚೆನ್ನೈನ ಹಲವಾರು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ, ಆತನಿಂದ 100 ಕ್ಕೂ ಹೆಚ್ಚು ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್ಯುವಿಯನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಆಡಳಿತಾರೂಢ ಡಿಎಂಕೆಯನ್ನು ಗುರಿಯಾಗಿಸಲು ಈ ಲೈಂಗಿಕ ದೌರ್ಜನ್ಯ ಪ್ರಕರಣವು ವಿರೋಧ ಪಕ್ಷದ ಎಐಎಡಿಎಂಕೆಗೆ ಹೊಸ ಶಸ್ತ್ರಾಸ್ತ್ರವನ್ನು ನೀಡಿತು. ಆಗ ಡಿಎಂಕೆ ತನಿಖೆಯನ್ನು ತ್ವರಿತಗೊಳಿಸಿ ನ್ಯಾಯವನ್ನು ಖಚಿತಪಡಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿತ್ತು.

ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಣ್ಣಿಸಿದ್ದ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ. ಅಣ್ಣಾಮಲೈ, ಘಟನೆಯ ಸಾಂಕೇತಿಕ ಕೃತ್ಯದಲ್ಲಿ ಸಾರ್ವಜನಿಕವಾಗಿ ತಮ್ಮನ್ನು ತಾವೇ ಛಡಿಯೇಟು ಹಾಕಿಕೊಂಡಿದ್ದರು.

 

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:52 pm, Mon, 2 June 25