AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್