AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
KUSHAL V
KUSHAL V
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು