AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ