AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್