AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು. ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, […]

ಅಕ್ಕನ ಮಗಳ ಮೊಬೈಲ್​ ಎಕ್ಸ್​ಚೇಂಜ್​ ಮಾಡಲ್ಲ ಎಂದಿದ್ದಕ್ಕೆ.. ಅಂಗಡಿ ಮುಂದೆ ಬೆಂಕಿ ಹಚ್ಚಿಕೊಂಡುಬಿಟ್ಟ!
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 15, 2020 | 1:25 PM

Share

ದೆಹಲಿ: ಮೊಬೈಲ್ ಫೋನ್​ ಬದಲಿಸಿಕೊಡಲು ನಿರಾಕರಿಸಿದ ಅಂಗಡಿ ಮಾಲೀಕನ ನಡೆಗೆ ಬೇಸತ್ತು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಗರದ ರೋಹಿಣಿಯಲ್ಲಿ ನಡೆದಿದೆ. 40 ವರ್ಷದ ಭೀಮ್ ಸಿಂಗ್ ಎಂಬಾತ ತನ್ನ ಅಕ್ಕನ ಮಗಳ ಆನ್​ಲೈನ್ ಕ್ಲಾಸ್​ಗಾಗಿ ಒಂದು ತಿಂಗಳ ಹಿಂದೆಯಷ್ಟೇ ದಕ್ಷಿಣ ರೋಹಿಣಿ ಮಾಲ್​ನಲ್ಲಿರುವ ಮೊಬೈಲ್ ಫೋನ್​ ಮಳಿಗೆಯಲ್ಲಿ ಮೊಬೈಲ್ ಒಂದನ್ನು ಖರೀದಿಸಿದ್ದನು.

ಆದರೆ, ಆ ಮೊಬೈಲ್ ಸರಿಯಾಗಿ ಕೆಲಸ ಮಾಡದ ಕಾರಣ ಅದನ್ನು ಬದಲಿಸಿಕೊಡುವಂತೆ ಅಂಗಡಿ ಮಾಲೀಕನಿಗೆ ಭೀಮ್ ಸಿಂಗ್ ಮನವಿ ಮಾಡಿಕೊಂಡನು. ಆದರೆ, ಕಂಪನಿಯ ನೀತಿಯನ್ನು ಉಲ್ಲೇಖಿಸಿ ಅಂಗಡಿ ಮಾಲೀಕ ಮೊಬೈಲ್​ ಎಕ್ಸ್​ಚೇಂಜ್​ ಮಾಡಲು ನಿರಾಕರಿಸಿದ್ದಾನೆ. ಆತನ ವರ್ತನೆಯಿಂದ ಬೇಸತ್ತು ಸಿಂಗ್ ಕಳೆದ ಶುಕ್ರವಾರ ಮಧ್ನಾಹ್ನ ಅಂಗಡಿಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಸದ್ಯ, ಘಟನೆಯಲ್ಲಿ ತೀವ್ರ ಸುಟ್ಟು ಗಾಯಗಳಾಗಿರುವ ಸಿಂಗ್​ನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಮ್​ ಸಿಂಗ್​ ಸಹೋದರಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು ಎಂದು ಹೇಳಲಾಗಿದೆ. ಆಕೆಯ ಅಗಲಿಕೆಯ ನಂತರ 12ನೇ ತರಗತಿಯಲ್ಲಿ ಓದುತಿದ್ದ ಸಹೋದರಿಯ ಮಗಳ ಆನ್​ಲೈನ್​ ಕ್ಲಾಸ್​ಗಾಗಿ 14 ಸಾವಿರ ರೂ. ಖರ್ಚು ಮಾಡಿ ಫೋನ್ ಖರೀದಿಸಿದ್ದರು ಎಂದು ಸಹ ತಿಳಿದುಬಂದಿದೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್