ತಮಿಳುನಾಡು: ಮನೆ ಕೆಡವುದನ್ನು ತಡೆಯಲು ತನ್ನ ಮೈಗೆ ಬೆಂಕಿ ಹಚ್ಚಿಕೊಂಡ ಯುವಕ

ಕಣ್ಣೆದುರೇ ಮನೆ ನೆಲಸಮವಾಗುತ್ತಿರುವುದನ್ನು ನೋಡಲಾರದೆ ಅಧಿಕಾರಿಗಳನ್ನು ತಡೆಯುವ ಉದ್ದೇಶದಿಂದ ಯುವಕನೊಬ್ಬ ಮೈಗೆ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮನೆಯನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳು ಮನೆ ಕೆಡವಲು ಮುಂದಾಗಿದ್ದರು

ತಮಿಳುನಾಡು: ಮನೆ ಕೆಡವುದನ್ನು ತಡೆಯಲು ತನ್ನ ಮೈಗೆ ಬೆಂಕಿ ಹಚ್ಚಿಕೊಂಡ ಯುವಕ
ಬೆಂಕಿImage Credit source: India Today
Follow us
|

Updated on: Jul 05, 2024 | 8:16 AM

ಮನೆ ಕೆಡವುದನ್ನು ತಡೆಯಲು ಯುವಕನೊಬ್ಬ ಮೈಗೆ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ. ಅವರು ಆ ಜಾಗವನ್ನು ಅತಿಕ್ರಮಣ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಂದೆಯ ಮರಣದ ನಂತರ ರಾಜ್​ಕುಮಾರ್ ಎಂಬ ವ್ಯಕ್ತಿ ಕುಟುಂಬದೊಂದಿಗೆ ವರ್ಷಗಳಿಂದ ಈ ಮನೆಯಲ್ಲಿ ವಾಸಿಸುತ್ತಿದ್ದ. ನಮ್ಮ ಸ್ಥಿತಿಯಿಂದ ಬೇಸರಗೊಂಡು ಯಾರೋ ನಮಗೆ ಈ ಆಸ್ತಿ ನೀಡಿದ್ದರು ಎಂದು ಆತನ ತಾಯಿ ಕಲ್ಯಾಣಿ ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ತಿರುವಳ್ಳೂರಿನ ಗುಮ್ಮಿಡಿಪೂಂಡಿ ಬಳಿಯ ನೇತಾಜಿ ನಗರದಲ್ಲಿ ಆಕೆಯ ಮನೆಯ ಪಕ್ಕದಲ್ಲಿ ಬಹುಮಹಡಿ ಅಪಾರ್ಟ್‌ಮೆಂಟ್ ನಿರ್ಮಾಣವಾದಾಗ ಪರಿಸ್ಥಿತಿ ಮತ್ತೊಂದು ತಿರುವು ಪಡೆಯಿತು. ಕಲ್ಯಾಣಿ ಅವರ ಮನೆ ಅತಿಕ್ರಮಣವಾಗಿದ್ದು ನಮ್ಮ ದಾರಿಗೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿ ನಿವಾಸಿಗಳು ದೂರು ನೀಡಿದ್ದರು.

ಅಧಿಕಾರಿಗಳು ನಡೆಸಿದ ತನಿಖೆಯಲ್ಲಿ ಭೂಮಿಯ ಭಾಗವು ಇನ್ನೂ ಜಾಗ ನೀಡಿದವರ ಹೆಸರಿನಲ್ಲಿದೆ. ಆದರೂ ಕೂಡ ವಾರಗಳ ಹಿಂದೆ ಕಲ್ಯಾಣಿಯವರ ನಿವಾಸಕ್ಕೆ ಅಧಿಕಾರಿಗಳು ಬಂದು ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದ್ದರು. ಕಲ್ಯಾಣಿ ಒಂದು ತಿಂಗಳ ಕಾಲಾವಕಾಶ ಕೋರಿದ್ದರು, ಗುರುವಾರ ಅಧಿಕಾರಿಗಳು ಬುಲ್ಡೋಜರ್​ನೊಂದಿಗೆ ಆಗಮಿಸಿ ಮನೆ ಕೆಡವಲು ಮುಂದಾಗಿದ್ದರು.

ಮತ್ತಷ್ಟು ಓದಿ: ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ

ಈ ಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್​ಕುಮಾರ್ ಮೈಗೆ ಬೆಂಕಿ ಹಚ್ಚಿಕೊಂಡು ಹೊರಗೆ ಓಡಿ ಅಧಿಕಾರಿಗಳನ್ನು ಬೆದರಿಸಲು ಪ್ರಯತ್ನಿಸಿದರು.ಅಗ್ನಿ ಶಾಮಕ ತಂಡವು ತಕ್ಷಣವೇ ಅವರನ್ನು ರಕ್ಷಿಸಿದ್ದಾರೆ. ಆದರೆ ಅವರ ದೇಹದ 60ರಷ್ಟು ಭಾಗಕ್ಕೆ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕ್ರಮಗಳನ್ನು ಖಂಡಿಸಿದ್ದಾರೆ ಮತ್ತು ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವನ್ನು ದೂಷಿಸಿದ್ದಾರೆ. ಈ ಡಿಎಂಕೆ ಆಡಳಿತದಲ್ಲಿ ರಿಯಲ್ ಎಸ್ಟೇಟ್ ದೊರೆಗಳು ಲಾಭಗಳು ಮತ್ತು ಅಭೂತಪೂರ್ವ ಸವಲತ್ತುಗಳನ್ನು ಅನುಭವಿಸುತ್ತಿದ್ದರೆ, ಸಾಮಾನ್ಯ ಜನರ ಮನೆಗಳು ಅಕ್ರಮ ನಿರ್ಮಾಣ ಎಂದು ನೆಲಸಮವಾಗಿವೆ ಎಂದು ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ