AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ

ವಾರಾಣಸಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಯ ನಡುವೆ ವ್ಯಕ್ತಿ ಅಂಗಡಿಗೆ ಬೆಂಕಿ ಹಚ್ಚಿ, ಪೆಟ್ರೋಲ್ ಸುರಿದುಕೊಂಡ ಘಟನೆ ನಡೆದಿದೆ. ಇಂದು ವಾರಾಣಸಿಯ ದಾಲ್ಮಂಡಿ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕಾಗಿ ದೊಡ್ಡ ಪ್ರಮಾಣದ ಕಟ್ಟಡ ಕೆಡವುವ ಕಾರ್ಯಾಚರಣೆ ಆರಂಭವಾದಾಗ ಉದ್ವಿಗ್ನತೆ ಭುಗಿಲೆದ್ದಿತು. ಈ ಸಂದರ್ಭದಲ್ಲಿ ಆಡಳಿತದ ಕ್ರಮವನ್ನು ವಿರೋಧಿಸಿ ವ್ಯಕ್ತಿಯೊಬ್ಬರು ತಮ್ಮ ಅಂಗಡಿಗೆ ಬೆಂಕಿ ಹಚ್ಚಿ ತಮ್ಮ ಮೈಗೂ ಪೆಟ್ರೋಲ್ ಸುರಿದುಕೊಂಡಿದ್ದಾರೆ. ಅಸುರಕ್ಷಿತ ಮತ್ತು ಅಗಲೀಕರಣ ಯೋಜನೆಗೆ ಅಡ್ಡಿಯುಂಟುಮಾಡುವ 21 ಕಟ್ಟಡಗಳನ್ನು ಕೆಡವಲಾಯಿತು.

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ
Varanasi Man Sets Shop Ablaze
ಸುಷ್ಮಾ ಚಕ್ರೆ
|

Updated on: Feb 09, 2026 | 8:00 PM

Share

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ತಪ್ಪೇನು? ನೀವು ನಮ್ಮನ್ನು ಕೊಲ್ಲುತ್ತೀರಾ? ನೀವು ರಸ್ತೆ ಅಗಲೀಕರಣ ಮಾಡಲು ಬಯಸಿದರೆ ನೀವು ಜನರ ಜೀವನವನ್ನು ನಾಶ ಮಾಡುತ್ತೀರಾ? ಸರ್ಕಾರ ನಮ್ಮನ್ನು ನಾಶ ಮಾಡುತ್ತಿದೆ. ಅವರು ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಅಳುತ್ತಾ ಕಿರುಚಾಡಿದ್ದಾರೆ. ಜನರೆಲ್ಲ ಅವರನ್ನು ಕೆಳಗಿಳಿಯಲು ಎಷ್ಟೇ ಬೇಡಿಕೊಂಡರೂ ಅವರು ಕೆಳಗೆ ಇಳಿಯಲಿಲ್ಲ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಗಲಾಟೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೂ ಮೊದಲು, ಜನವರಿ 21ರಂದು 8 ಮನೆಗಳನ್ನು ಒಟ್ಟಿಗೆ ಕೆಡವಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು