Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಆನ್​ಲೈನ್​ ಗೇಮ್ ವಿಚಾರವಾಗಿ ಗಲಾಟೆ, ಕೋಪದಲ್ಲಿ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ

ಆನ್​ಲೈನ್​ ಆಟದ ಗೀಳು ಯಾರನ್ನೂ ಬಿಟ್ಟಿಲ್ಲ, ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಆಡುತ್ತಾರೆ. ಆ ಆಟದ ನಡುವೆ ಇಬ್ಬರ ನಡುವೆ ಗಲಾಟೆ ಶುರುವಾಗಿ ಅದು ತಾರಕಕ್ಕೇರಿ ವ್ಯಕ್ತಿಯೊಬ್ಬ ಸೈನಿಕನ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಯೋಧನ ಪತ್ನಿ ದೂರಿನ ಮೇರೆಗೆ ಮಹಾರಾಜಪುರ ಠಾಣೆ ಪೊಲೀಸರು ಖೇಮ್ರಿಯಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.

ಮಧ್ಯಪ್ರದೇಶ: ಆನ್​ಲೈನ್​ ಗೇಮ್ ವಿಚಾರವಾಗಿ ಗಲಾಟೆ, ಕೋಪದಲ್ಲಿ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಕಾರುImage Credit source: India Today
Follow us
ನಯನಾ ರಾಜೀವ್
|

Updated on: Apr 18, 2024 | 9:29 AM

ಆನ್​ಲೈನ್​ ಗೇಮಿಂಗ್(Online Gaming) ವಿವಾದವು ತಾರಕಕ್ಕೇರಿ ಕೊನೆಗೆ ವ್ಯಕ್ತಿಯೊಬ್ಬ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಬ್ಲು ಖೇಮ್ರಿಯಾ ಎಂದು ಗುರುತಿಸಲಾದ ವ್ಯಕ್ತಿ, ಆನ್‌ಲೈನ್ ಗೇಮ್‌ನ ಐಡಿ ಕುರಿತು ಸೈನಿಕನ ಮಗಳೊಂದಿಗೆ ಜಗಳವಾಡಿದ್ದ, ಬಳಿಕ ಮಧ್ಯರಾತ್ರಿಯಲ್ಲಿ ಅವರ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇಡೀ ಘಟನೆ ಮನೆಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯೋಧನ ಪತ್ನಿಯ ದೂರಿನ ಮೇರೆಗೆ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಯೋಧರ ಮಗಳು ಮತ್ತು ಆರೋಪಿ ಆನ್‌ಲೈನ್ ಗೇಮ್ ಫ್ರೀ ಫೈರ್ ಆಡುತ್ತಿದ್ದರು. ಬಬ್ಲು ಖೇಮ್ರಿಯಾ ಆಟಕ್ಕೆ ಲಕ್ಷಗಟ್ಟಲೆ ಖರ್ಚು ಮಾಡಿದ್ದ. ಯೋಧನ ಮಗಳು ಆಟವಾಡಲು ಬಬ್ಲು ಅವರ ಫ್ರೀ ಫೈರ್ ಐಡಿಯನ್ನು ತೆಗೆದುಕೊಂಡು ನಂತರ ಪಾಸ್‌ವರ್ಡ್ ಬದಲಾಯಿಸಿ ಅದನ್ನು ಅವನೊಂದಿಗೆ ಹಂಚಿಕೊಳ್ಳಲು ನಿರಾಕರಿಸಿದಾಗ ವಿವಾದ ಶುರುವಾಗಿತ್ತು.

ಇದರಿಂದ ಮನನೊಂದ ಖೇಮ್ರಿಯಾ ಮಂಗಳವಾರ ರಾತ್ರಿ ಯೋಧನ ಮನೆಯ ಹೊರಗೆ ನಿಲ್ಲಿಸಿದ್ದ ಸ್ವಿಫ್ಟ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಮತ್ತಷ್ಟು ಓದಿ: ಗೇಮರ್ ಗಳ ಸಂವಾದ ನಡೆಸಿ ಭಾರತದಲ್ಲಿ ಗೇಮಿಂಗ್ ಭವಿಷ್ಯ ಮತ್ತು ಇತರ ಆಯಾಮಗಳನ್ನು ಚರ್ಚಿಸಿದ ಪ್ರಧಾನಿ ನರೇಂದ್ರ ಮೋದಿ

ಯೋಧನ ಪತ್ನಿ ದೂರಿನ ಮೇರೆಗೆ ಮಹಾರಾಜಪುರ ಠಾಣೆ ಪೊಲೀಸರು ಖೇಮ್ರಿಯಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.

ಈ ಹಿಂದೆ ಖೇಮ್ರಿಯಾ ವಿರುದ್ಧ ಯೋಧರ ಮಗಳು ಕಿರುಕುಳ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯದ ವಿಚಾರಣೆ ವೇಳೆ ಬಬ್ಲು ಪರಾರಿಯಾಗಿದ್ದ. ಈ ವಿಷಯಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ