AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಆನ್​ಲೈನ್​ ಗೇಮ್ ವಿಚಾರವಾಗಿ ಗಲಾಟೆ, ಕೋಪದಲ್ಲಿ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ

ಆನ್​ಲೈನ್​ ಆಟದ ಗೀಳು ಯಾರನ್ನೂ ಬಿಟ್ಟಿಲ್ಲ, ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಆಡುತ್ತಾರೆ. ಆ ಆಟದ ನಡುವೆ ಇಬ್ಬರ ನಡುವೆ ಗಲಾಟೆ ಶುರುವಾಗಿ ಅದು ತಾರಕಕ್ಕೇರಿ ವ್ಯಕ್ತಿಯೊಬ್ಬ ಸೈನಿಕನ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಯೋಧನ ಪತ್ನಿ ದೂರಿನ ಮೇರೆಗೆ ಮಹಾರಾಜಪುರ ಠಾಣೆ ಪೊಲೀಸರು ಖೇಮ್ರಿಯಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.

ಮಧ್ಯಪ್ರದೇಶ: ಆನ್​ಲೈನ್​ ಗೇಮ್ ವಿಚಾರವಾಗಿ ಗಲಾಟೆ, ಕೋಪದಲ್ಲಿ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಕಾರುImage Credit source: India Today
ನಯನಾ ರಾಜೀವ್
|

Updated on: Apr 18, 2024 | 9:29 AM

Share

ಆನ್​ಲೈನ್​ ಗೇಮಿಂಗ್(Online Gaming) ವಿವಾದವು ತಾರಕಕ್ಕೇರಿ ಕೊನೆಗೆ ವ್ಯಕ್ತಿಯೊಬ್ಬ ಯೋಧರೊಬ್ಬರ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಬ್ಲು ಖೇಮ್ರಿಯಾ ಎಂದು ಗುರುತಿಸಲಾದ ವ್ಯಕ್ತಿ, ಆನ್‌ಲೈನ್ ಗೇಮ್‌ನ ಐಡಿ ಕುರಿತು ಸೈನಿಕನ ಮಗಳೊಂದಿಗೆ ಜಗಳವಾಡಿದ್ದ, ಬಳಿಕ ಮಧ್ಯರಾತ್ರಿಯಲ್ಲಿ ಅವರ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇಡೀ ಘಟನೆ ಮನೆಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯೋಧನ ಪತ್ನಿಯ ದೂರಿನ ಮೇರೆಗೆ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಯೋಧರ ಮಗಳು ಮತ್ತು ಆರೋಪಿ ಆನ್‌ಲೈನ್ ಗೇಮ್ ಫ್ರೀ ಫೈರ್ ಆಡುತ್ತಿದ್ದರು. ಬಬ್ಲು ಖೇಮ್ರಿಯಾ ಆಟಕ್ಕೆ ಲಕ್ಷಗಟ್ಟಲೆ ಖರ್ಚು ಮಾಡಿದ್ದ. ಯೋಧನ ಮಗಳು ಆಟವಾಡಲು ಬಬ್ಲು ಅವರ ಫ್ರೀ ಫೈರ್ ಐಡಿಯನ್ನು ತೆಗೆದುಕೊಂಡು ನಂತರ ಪಾಸ್‌ವರ್ಡ್ ಬದಲಾಯಿಸಿ ಅದನ್ನು ಅವನೊಂದಿಗೆ ಹಂಚಿಕೊಳ್ಳಲು ನಿರಾಕರಿಸಿದಾಗ ವಿವಾದ ಶುರುವಾಗಿತ್ತು.

ಇದರಿಂದ ಮನನೊಂದ ಖೇಮ್ರಿಯಾ ಮಂಗಳವಾರ ರಾತ್ರಿ ಯೋಧನ ಮನೆಯ ಹೊರಗೆ ನಿಲ್ಲಿಸಿದ್ದ ಸ್ವಿಫ್ಟ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಮತ್ತಷ್ಟು ಓದಿ: ಗೇಮರ್ ಗಳ ಸಂವಾದ ನಡೆಸಿ ಭಾರತದಲ್ಲಿ ಗೇಮಿಂಗ್ ಭವಿಷ್ಯ ಮತ್ತು ಇತರ ಆಯಾಮಗಳನ್ನು ಚರ್ಚಿಸಿದ ಪ್ರಧಾನಿ ನರೇಂದ್ರ ಮೋದಿ

ಯೋಧನ ಪತ್ನಿ ದೂರಿನ ಮೇರೆಗೆ ಮಹಾರಾಜಪುರ ಠಾಣೆ ಪೊಲೀಸರು ಖೇಮ್ರಿಯಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.

ಈ ಹಿಂದೆ ಖೇಮ್ರಿಯಾ ವಿರುದ್ಧ ಯೋಧರ ಮಗಳು ಕಿರುಕುಳ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯದ ವಿಚಾರಣೆ ವೇಳೆ ಬಬ್ಲು ಪರಾರಿಯಾಗಿದ್ದ. ಈ ವಿಷಯಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ