AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 07, 2022 | 10:41 AM

Share

ಲಕ್ನೋ: ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಶ್ವಾನ ಪ್ರಿಯನಾಗಿರುವ ಆಶೀಶ್ 2 ಡಜನ್​ಗೂ ಅಧಿಕ ನಾಯಿಗಳನ್ನು ಸಾಕಿದ್ದ. ಈ ನಡುವೆ, ಅವುಗಳಿಗೆ ಚಪಾತಿ ಮಾಡಿಕೊಡಲು ತನ್ನ ಸಹೋದರಿಯನ್ನು ಕೇಳಿಕೊಂಡಿದ್ದಾನೆ. ಆದರೆ, ಆತನ ತಂಗಿ ಇದಕ್ಕೆ ಒಪ್ಪದಿದ್ದಾಗ ಸಿಟ್ಟಾದ ಆಶೀಶ್​ ಪಾರುಲ್​ ತಲೆ ಮತ್ತು ಎದೆ ಭಾಗಕ್ಕೆ  ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ಈ ಬಗ್ಗೆ, ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಅಧೀಕ್ಷಕ ದೆಹತ್ ಕೇಶವ್ ಕುಮಾರ್, 18-20 ನಾಯಿಗಳನ್ನು ನೋಡಿಕೊಳ್ಳಲು ಪಾರುಲ್ ನಿರಾಕರಿಸಿದ್ದಕ್ಕೆ, ಆಶೀಶ್ ಆಕೆಯನ್ನು  ಹತ್ಯೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ದಿನನಿತ್ಯವೂ ಅವರು ಜಗಳ ಮಾಡಿಕೊಳ್ಳುತ್ತಿದ್ದರು ಎಂದೂ ತಿಳಿಸಿದ್ದಾರೆ. ಪ್ರತಿನಿತ್ಯ 20 ಚಪಾತಿಗಳನ್ನು ಮಾಡುವಂತೆ ಆಶೀಶ್ ಪಾರುಲ್​ಗೆ ಪೀಡಿಸುತ್ತಿದ್ದ. ಇದರಿಂದ ಆಕೆ ಬೇಸತ್ತಿದ್ದಳು ಎಂದು ಕೇಶವ್ ಕುಮಾರ್ ಮಾಹಿತಿ ನೀಡಿದರು.

Published On - 2:15 pm, Tue, 15 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್