AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:41 AM

Share

ಲಕ್ನೋ: ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಶ್ವಾನ ಪ್ರಿಯನಾಗಿರುವ ಆಶೀಶ್ 2 ಡಜನ್​ಗೂ ಅಧಿಕ ನಾಯಿಗಳನ್ನು ಸಾಕಿದ್ದ. ಈ ನಡುವೆ, ಅವುಗಳಿಗೆ ಚಪಾತಿ ಮಾಡಿಕೊಡಲು ತನ್ನ ಸಹೋದರಿಯನ್ನು ಕೇಳಿಕೊಂಡಿದ್ದಾನೆ. ಆದರೆ, ಆತನ ತಂಗಿ ಇದಕ್ಕೆ ಒಪ್ಪದಿದ್ದಾಗ ಸಿಟ್ಟಾದ ಆಶೀಶ್​ ಪಾರುಲ್​ ತಲೆ ಮತ್ತು ಎದೆ ಭಾಗಕ್ಕೆ  ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ಈ ಬಗ್ಗೆ, ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಅಧೀಕ್ಷಕ ದೆಹತ್ ಕೇಶವ್ ಕುಮಾರ್, 18-20 ನಾಯಿಗಳನ್ನು ನೋಡಿಕೊಳ್ಳಲು ಪಾರುಲ್ ನಿರಾಕರಿಸಿದ್ದಕ್ಕೆ, ಆಶೀಶ್ ಆಕೆಯನ್ನು  ಹತ್ಯೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ದಿನನಿತ್ಯವೂ ಅವರು ಜಗಳ ಮಾಡಿಕೊಳ್ಳುತ್ತಿದ್ದರು ಎಂದೂ ತಿಳಿಸಿದ್ದಾರೆ. ಪ್ರತಿನಿತ್ಯ 20 ಚಪಾತಿಗಳನ್ನು ಮಾಡುವಂತೆ ಆಶೀಶ್ ಪಾರುಲ್​ಗೆ ಪೀಡಿಸುತ್ತಿದ್ದ. ಇದರಿಂದ ಆಕೆ ಬೇಸತ್ತಿದ್ದಳು ಎಂದು ಕೇಶವ್ ಕುಮಾರ್ ಮಾಹಿತಿ ನೀಡಿದರು.

Published On - 2:15 pm, Tue, 15 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್