AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:41 AM

Share

ಲಕ್ನೋ: ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಶ್ವಾನ ಪ್ರಿಯನಾಗಿರುವ ಆಶೀಶ್ 2 ಡಜನ್​ಗೂ ಅಧಿಕ ನಾಯಿಗಳನ್ನು ಸಾಕಿದ್ದ. ಈ ನಡುವೆ, ಅವುಗಳಿಗೆ ಚಪಾತಿ ಮಾಡಿಕೊಡಲು ತನ್ನ ಸಹೋದರಿಯನ್ನು ಕೇಳಿಕೊಂಡಿದ್ದಾನೆ. ಆದರೆ, ಆತನ ತಂಗಿ ಇದಕ್ಕೆ ಒಪ್ಪದಿದ್ದಾಗ ಸಿಟ್ಟಾದ ಆಶೀಶ್​ ಪಾರುಲ್​ ತಲೆ ಮತ್ತು ಎದೆ ಭಾಗಕ್ಕೆ  ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ಈ ಬಗ್ಗೆ, ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಅಧೀಕ್ಷಕ ದೆಹತ್ ಕೇಶವ್ ಕುಮಾರ್, 18-20 ನಾಯಿಗಳನ್ನು ನೋಡಿಕೊಳ್ಳಲು ಪಾರುಲ್ ನಿರಾಕರಿಸಿದ್ದಕ್ಕೆ, ಆಶೀಶ್ ಆಕೆಯನ್ನು  ಹತ್ಯೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ದಿನನಿತ್ಯವೂ ಅವರು ಜಗಳ ಮಾಡಿಕೊಳ್ಳುತ್ತಿದ್ದರು ಎಂದೂ ತಿಳಿಸಿದ್ದಾರೆ. ಪ್ರತಿನಿತ್ಯ 20 ಚಪಾತಿಗಳನ್ನು ಮಾಡುವಂತೆ ಆಶೀಶ್ ಪಾರುಲ್​ಗೆ ಪೀಡಿಸುತ್ತಿದ್ದ. ಇದರಿಂದ ಆಕೆ ಬೇಸತ್ತಿದ್ದಳು ಎಂದು ಕೇಶವ್ ಕುಮಾರ್ ಮಾಹಿತಿ ನೀಡಿದರು.

Published On - 2:15 pm, Tue, 15 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ