AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಅಂತಾ.. ತಂಗಿಯನ್ನೇ ಕೊಂದ ಶ್ವಾನಪ್ರಿಯ ಅಣ್ಣ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:41 AM

Share

ಲಕ್ನೋ: ಸಾಕು ನಾಯಿಗಳಿಗೆ ಚಪಾತಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ತನ್ನ ಸ್ವಂತ ತಂಗಿಯನ್ನೇ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. 25 ವರ್ಷದ ಆಶೀಶ್​ ಎಂಬಾತ ತನ್ನ ತಂಗಿ ಪಾರುಲ್​ (23) ಮೇಲೆ ಎರಡು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಶ್ವಾನ ಪ್ರಿಯನಾಗಿರುವ ಆಶೀಶ್ 2 ಡಜನ್​ಗೂ ಅಧಿಕ ನಾಯಿಗಳನ್ನು ಸಾಕಿದ್ದ. ಈ ನಡುವೆ, ಅವುಗಳಿಗೆ ಚಪಾತಿ ಮಾಡಿಕೊಡಲು ತನ್ನ ಸಹೋದರಿಯನ್ನು ಕೇಳಿಕೊಂಡಿದ್ದಾನೆ. ಆದರೆ, ಆತನ ತಂಗಿ ಇದಕ್ಕೆ ಒಪ್ಪದಿದ್ದಾಗ ಸಿಟ್ಟಾದ ಆಶೀಶ್​ ಪಾರುಲ್​ ತಲೆ ಮತ್ತು ಎದೆ ಭಾಗಕ್ಕೆ  ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾನೆ.

ಈ ಬಗ್ಗೆ, ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಅಧೀಕ್ಷಕ ದೆಹತ್ ಕೇಶವ್ ಕುಮಾರ್, 18-20 ನಾಯಿಗಳನ್ನು ನೋಡಿಕೊಳ್ಳಲು ಪಾರುಲ್ ನಿರಾಕರಿಸಿದ್ದಕ್ಕೆ, ಆಶೀಶ್ ಆಕೆಯನ್ನು  ಹತ್ಯೆಗೈದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ದಿನನಿತ್ಯವೂ ಅವರು ಜಗಳ ಮಾಡಿಕೊಳ್ಳುತ್ತಿದ್ದರು ಎಂದೂ ತಿಳಿಸಿದ್ದಾರೆ. ಪ್ರತಿನಿತ್ಯ 20 ಚಪಾತಿಗಳನ್ನು ಮಾಡುವಂತೆ ಆಶೀಶ್ ಪಾರುಲ್​ಗೆ ಪೀಡಿಸುತ್ತಿದ್ದ. ಇದರಿಂದ ಆಕೆ ಬೇಸತ್ತಿದ್ದಳು ಎಂದು ಕೇಶವ್ ಕುಮಾರ್ ಮಾಹಿತಿ ನೀಡಿದರು.

Published On - 2:15 pm, Tue, 15 December 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ