AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೃತ್ಯ ಮಾಡುತ್ತ ತನ್ನನ್ನು ತಾನು ಇರಿದುಕೊಂಡು ಮೃತಪಟ್ಟ ವ್ಯಕ್ತಿ: ಇನ್ನೊಂದೆಡೆ ಗುಂಡು ಹಾರಿಸಿ ಸ್ನೇಹಿತನನ್ನೇ ಕೊಂದವ ಎಸ್ಕೇಪ್​

ಇವರೆಲ್ಲ ಸೇರಿ ನೃತ್ಯ ಮಾಡಿದ್ದು, ಬಳಿಕ ಗೋಪಾಲ್​ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದರ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಸದ್ಯ ಗೋಪಾಲ್​ ಮೃತದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ.

Video: ನೃತ್ಯ ಮಾಡುತ್ತ ತನ್ನನ್ನು ತಾನು ಇರಿದುಕೊಂಡು ಮೃತಪಟ್ಟ ವ್ಯಕ್ತಿ: ಇನ್ನೊಂದೆಡೆ ಗುಂಡು ಹಾರಿಸಿ ಸ್ನೇಹಿತನನ್ನೇ ಕೊಂದವ ಎಸ್ಕೇಪ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 19, 2022 | 1:05 PM

Share

ಹೋಳಿ ಹುಣ್ಣಿಮೆ ದೇಶಾದ್ಯಂತ ಸಂಭ್ರಮದ ಹಬ್ಬ. ಬಣ್ಣ ಎರಚುವುದು, ಸಂಗೀತ, ನೃತ್ಯಗಳಂಥ ಆಚರಣೆ ಸಾಮಾನ್ಯ. ಈ ಸಂದರ್ಭದಲ್ಲಿ ಕೆಲವು ಅವಘಡಗಳು ಆಗುತ್ತಿರುತ್ತವೆ. ಹಾಗೇ ಮಧ್ಯಪ್ರದೇಶದ ಬಂಗಾಂಗ ಎಂಬಲ್ಲಿ ಹೋಳಿ ಸಂಭ್ರಮದ ನಡುವೆಯೊಂದು ದುರ್ಘಟನೆ ನಡೆದಿದ್ದು ವರದಿಯಾಗಿದೆ. ಇಲ್ಲಿ ಹೋಳಿ ಆಚರಣೆ ಭರ್ಜರಿಯಾಗಿಯೇ ಸಾಗಿತ್ತು. ಪರಸ್ಪರ ಬಣ್ಣಗಳನ್ನು ಎರಚಿಕೊಂಡು, ಮ್ಯೂಸಿಕ್​ ಹಾಕಿ ಡ್ಯಾನ್ಸ್​ ಮಾಡುತ್ತಿದ್ದರು. ಇದೇ ವೇಳೆ ವ್ಯಕ್ತಿಯೊಬ್ಬ ಕೈಯಲ್ಲಿ ಚಾಕು ಹಿಡಿದುಕೊಂಡು ನೃತ್ಯ ಮಾಡುತ್ತಿದ್ದ, ಹೀಗೆ ಡ್ಯಾನ್ಸ್ ಮಾಡುತ್ತ, ಮಾಡುತ್ತ ತನಗೆ ತಾನೇ ಇರಿದುಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಅವನು ಬದುಕುಳಿಯಲಿಲ್ಲ. ಘಟನೆ ಬಗ್ಗೆ ಬಂಗಾಂಗ ಪೊಲೀಸ್ ಠಾಣೆ ಅಧಿಕಾರಿ ಯೋಗೇಶ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು ಗೋಪಾಲ್​ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಹೋಳಿ ಆಚರಣೆಯಲ್ಲಿ ತೊಡಗಿದ್ದರು.  ಇವರೆಲ್ಲ ಸೇರಿ ನೃತ್ಯ ಮಾಡಿದ್ದು, ಬಳಿಕ ಗೋಪಾಲ್​ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದರ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಸದ್ಯ ಗೋಪಾಲ್​ ಮೃತದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಚಾಕುವನ್ನು ಏಕೆ ಹಿಡಿದುಕೊಂಡಿದ್ದ, ತನಗೆ ತಾನೇ ಇರಿದುಕೊಂಡಿದ್ದೇಕೆ? ಆಕಸ್ಮಿಕವಾಗಿ ನಡೆದ ಘಟನೆಯೂ? ಆತ್ಮಹತ್ಯೆ ಮಾಡಿಕೊಂಡಿದ್ದೋ ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ಶುರುವಾಗಿದೆ.  ಅವರ ಸ್ನೇಹಿತರನ್ನೂ ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತದಲ್ಲಿ ಗುಂಡಿನ ದಾಳಿ

ಪಶ್ಚಿಮ ಬಂಗಾಳದ ಕೋಲ್ಕತ್ತದ ರೆಜೆಂಟ್​ ಪಾರ್ಕ್​​ನಲ್ಲಿ ಕೂಡ ಹೋಳಿ ಆಚರಣೆಯ ಮಧ್ಯೆ ದುರ್ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ತೊಡಗಿದ್ದ ಸ್ನೇಹಿತರ ಮಧ್ಯೆ ಮನಸ್ತಾಪ ಬಂದು, ಅದೇ ದೊಡ್ಡ ಜಗಳಕ್ಕೆ ತಿರುಗಿ ಒಬ್ಬನ ಹತ್ಯೆಯಾಗಿದೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.  ಸ್ನೇಹಿತರ ಗಲಾಟೆ ಮಧ್ಯೆ ಒಬ್ಬಾತ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಮೃತಪಟ್ಟವನ ಹೆಸರು ದಿಲೀಪ್​ ಚೌಹಾಣ್​ ಎಂದು ಗುರುತಿಸಲಾಗಿದೆ. ಆರೋಪಿ ಸುಜಿತ್​ ಮಲಿಕ್​ ಪರಾರಿಯಾಗಿದ್ದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ನಾವು ಹೆಂಗ್ ಬದುಕ ಬೇಕಂದ್ರ ಭೂಮಿಗೂ ಆನಂದ ಆಗಬೇಕು; ಸಿದ್ಧೇಶ್ವರ ಸ್ವಾಮೀಜಿ

Published On - 9:12 am, Sat, 19 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ