AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೃತ್ಯ ಮಾಡುತ್ತ ತನ್ನನ್ನು ತಾನು ಇರಿದುಕೊಂಡು ಮೃತಪಟ್ಟ ವ್ಯಕ್ತಿ: ಇನ್ನೊಂದೆಡೆ ಗುಂಡು ಹಾರಿಸಿ ಸ್ನೇಹಿತನನ್ನೇ ಕೊಂದವ ಎಸ್ಕೇಪ್​

ಇವರೆಲ್ಲ ಸೇರಿ ನೃತ್ಯ ಮಾಡಿದ್ದು, ಬಳಿಕ ಗೋಪಾಲ್​ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದರ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಸದ್ಯ ಗೋಪಾಲ್​ ಮೃತದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ.

Video: ನೃತ್ಯ ಮಾಡುತ್ತ ತನ್ನನ್ನು ತಾನು ಇರಿದುಕೊಂಡು ಮೃತಪಟ್ಟ ವ್ಯಕ್ತಿ: ಇನ್ನೊಂದೆಡೆ ಗುಂಡು ಹಾರಿಸಿ ಸ್ನೇಹಿತನನ್ನೇ ಕೊಂದವ ಎಸ್ಕೇಪ್​
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Mar 19, 2022 | 1:05 PM

Share

ಹೋಳಿ ಹುಣ್ಣಿಮೆ ದೇಶಾದ್ಯಂತ ಸಂಭ್ರಮದ ಹಬ್ಬ. ಬಣ್ಣ ಎರಚುವುದು, ಸಂಗೀತ, ನೃತ್ಯಗಳಂಥ ಆಚರಣೆ ಸಾಮಾನ್ಯ. ಈ ಸಂದರ್ಭದಲ್ಲಿ ಕೆಲವು ಅವಘಡಗಳು ಆಗುತ್ತಿರುತ್ತವೆ. ಹಾಗೇ ಮಧ್ಯಪ್ರದೇಶದ ಬಂಗಾಂಗ ಎಂಬಲ್ಲಿ ಹೋಳಿ ಸಂಭ್ರಮದ ನಡುವೆಯೊಂದು ದುರ್ಘಟನೆ ನಡೆದಿದ್ದು ವರದಿಯಾಗಿದೆ. ಇಲ್ಲಿ ಹೋಳಿ ಆಚರಣೆ ಭರ್ಜರಿಯಾಗಿಯೇ ಸಾಗಿತ್ತು. ಪರಸ್ಪರ ಬಣ್ಣಗಳನ್ನು ಎರಚಿಕೊಂಡು, ಮ್ಯೂಸಿಕ್​ ಹಾಕಿ ಡ್ಯಾನ್ಸ್​ ಮಾಡುತ್ತಿದ್ದರು. ಇದೇ ವೇಳೆ ವ್ಯಕ್ತಿಯೊಬ್ಬ ಕೈಯಲ್ಲಿ ಚಾಕು ಹಿಡಿದುಕೊಂಡು ನೃತ್ಯ ಮಾಡುತ್ತಿದ್ದ, ಹೀಗೆ ಡ್ಯಾನ್ಸ್ ಮಾಡುತ್ತ, ಮಾಡುತ್ತ ತನಗೆ ತಾನೇ ಇರಿದುಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಅವನು ಬದುಕುಳಿಯಲಿಲ್ಲ. ಘಟನೆ ಬಗ್ಗೆ ಬಂಗಾಂಗ ಪೊಲೀಸ್ ಠಾಣೆ ಅಧಿಕಾರಿ ಯೋಗೇಶ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು ಗೋಪಾಲ್​ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಹೋಳಿ ಆಚರಣೆಯಲ್ಲಿ ತೊಡಗಿದ್ದರು.  ಇವರೆಲ್ಲ ಸೇರಿ ನೃತ್ಯ ಮಾಡಿದ್ದು, ಬಳಿಕ ಗೋಪಾಲ್​ ತನಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದರ ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಸದ್ಯ ಗೋಪಾಲ್​ ಮೃತದೇಹವನ್ನು ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಚಾಕುವನ್ನು ಏಕೆ ಹಿಡಿದುಕೊಂಡಿದ್ದ, ತನಗೆ ತಾನೇ ಇರಿದುಕೊಂಡಿದ್ದೇಕೆ? ಆಕಸ್ಮಿಕವಾಗಿ ನಡೆದ ಘಟನೆಯೂ? ಆತ್ಮಹತ್ಯೆ ಮಾಡಿಕೊಂಡಿದ್ದೋ ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ಶುರುವಾಗಿದೆ.  ಅವರ ಸ್ನೇಹಿತರನ್ನೂ ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತದಲ್ಲಿ ಗುಂಡಿನ ದಾಳಿ

ಪಶ್ಚಿಮ ಬಂಗಾಳದ ಕೋಲ್ಕತ್ತದ ರೆಜೆಂಟ್​ ಪಾರ್ಕ್​​ನಲ್ಲಿ ಕೂಡ ಹೋಳಿ ಆಚರಣೆಯ ಮಧ್ಯೆ ದುರ್ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ತೊಡಗಿದ್ದ ಸ್ನೇಹಿತರ ಮಧ್ಯೆ ಮನಸ್ತಾಪ ಬಂದು, ಅದೇ ದೊಡ್ಡ ಜಗಳಕ್ಕೆ ತಿರುಗಿ ಒಬ್ಬನ ಹತ್ಯೆಯಾಗಿದೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.  ಸ್ನೇಹಿತರ ಗಲಾಟೆ ಮಧ್ಯೆ ಒಬ್ಬಾತ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಮೃತಪಟ್ಟವನ ಹೆಸರು ದಿಲೀಪ್​ ಚೌಹಾಣ್​ ಎಂದು ಗುರುತಿಸಲಾಗಿದೆ. ಆರೋಪಿ ಸುಜಿತ್​ ಮಲಿಕ್​ ಪರಾರಿಯಾಗಿದ್ದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ: ನಾವು ಹೆಂಗ್ ಬದುಕ ಬೇಕಂದ್ರ ಭೂಮಿಗೂ ಆನಂದ ಆಗಬೇಕು; ಸಿದ್ಧೇಶ್ವರ ಸ್ವಾಮೀಜಿ

Published On - 9:12 am, Sat, 19 March 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ