AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಯ ಕ್ರೂರತೆ; ಪ್ರೀತಿಸಿದಾಕೆ ಮತ್ತೊಬ್ಬನೊಂದಿಗೆ ಕಾಲಕಳೆಯುತ್ತಿದ್ದಾಳೆಂಬ ಸಿಟ್ಟಿನಲ್ಲಿ 18 ಬಾರಿ ಇರಿದ ಯುವಕ

ಘಟನೆ ನಡೆದದ್ದು ಗ್ರೇಟರ್​ ಹೈದರಾಬಾದ್​ ವ್ಯಾಪ್ತಿಯ ಹಸ್ತಿನಾಪುರಂನಲ್ಲಿ. ಎಲ್​ಬಿ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಬರುವ ಈ ನಗರದಲ್ಲಿ ಬಾಡಿಗೆ ರೂಂನಲ್ಲಿ ಆಕೆ ವಾಸವಾಗಿದ್ದಳು. 

ಪ್ರೇಮಿಯ ಕ್ರೂರತೆ; ಪ್ರೀತಿಸಿದಾಕೆ ಮತ್ತೊಬ್ಬನೊಂದಿಗೆ ಕಾಲಕಳೆಯುತ್ತಿದ್ದಾಳೆಂಬ ಸಿಟ್ಟಿನಲ್ಲಿ 18 ಬಾರಿ ಇರಿದ ಯುವಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 11, 2021 | 9:33 AM

Share

ಹೈದರಾಬಾದ್​: ಯುವತಿಯೊಬ್ಬಳು ಆಕೆಯ ಪ್ರಿಯಕರನಿಂದ ಬರ್ಬರವಾಗಿ ಹಲ್ಲೆಗೊಳಗಾಗಿದ್ದಾಳೆ. ಯುವತಿ ಆತನನ್ನು ಮದುವೆಯಾಗಲು ನಿರಾಕರಿಸಿದ್ದೇ ಈ ಹಲ್ಲೆಗೆ  ಕಾರಣ ಎಂದು ಹೇಳಲಾಗಿದೆ. ಆದರೆ ಆಕೆಯ ಮೇಲೆ ಯುವಕ ಮಾಡಿದ ಹಲ್ಲೆಯ  ಭೀಕರತೆ ನಿಜಕ್ಕೂ ಶಾಕ್​ ತರುವಂತಿದೆ. ಆ ವ್ಯಕ್ತಿ ಯುವತಿಗೆ ಬರೋಬ್ಬರಿ 18 ಬಾರಿ ಇರಿದಿದ್ದಾನೆ.

ಈ ಘಟನೆ ನಡೆದದ್ದು ಗ್ರೇಟರ್​ ಹೈದರಾಬಾದ್​ ವ್ಯಾಪ್ತಿಯ ಹಸ್ತಿನಾಪುರಂನಲ್ಲಿ. ಎಲ್​ಬಿ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಬರುವ ಈ ನಗರದಲ್ಲಿ ಬಾಡಿಗೆ ರೂಂನಲ್ಲಿ ಆಕೆ ವಾಸವಾಗಿದ್ದಳು.  ಯುವತಿಯ ಹೆಸರು ಶಿರೀಷಾ. ಆರೋಪಿ ಬಸವರಾಜ್​. ಇವರಿಬ್ಬರೂ ವಿಕಾರಾಬಾದ್​ ಜಿಲ್ಲೆಯ ದೌಲತಾಬಾದ್​​ ನಿವಾಸಿಗಳಾಗಿದ್ದು, ಕಳೆದ ಕೆಲವು ವರ್ಷಗಳಿಂದಲೂ ರಿಲೇಶನ್​ಶಿಪ್​​ನಲ್ಲಿ ಇದ್ದರು. ಆದರೆ ಎರಡು ತಿಂಗಳಿಂದ ಶಿರೀಷಾ ಬೇರೊಬ್ಬನ ಸಂಘ ಮಾಡಿದ್ದೇ ಬಸವರಾಜ್​ ಕೋಪಕ್ಕೆ ಕಾರಣ. ಶಿರೀಷಾ ಇತ್ತೀಚೆಗೆ ಶ್ರೀಧರ್​ ಎಂಬುವನೊಂದಿಗೆ ತುಂಬ ಕ್ಲೋಸ್​ ಆಗಿದ್ದಳು. ಹೀಗಾಗಿ ಬಸವರಾಜ್​ನನ್ನು ಮದುವೆಯಾಗುವುದಿಲ್ಲ ಎನ್ನುತ್ತಿದ್ದಳು. ಇದೇ ಕಾರಣಕ್ಕೆ ಕೋಪಗೊಂಡ ಬಸವರಾಜ್​ ಶಿರೀಷಾಳಿಗೆ 18 ಬಾರಿ ಚಾಕುವಿನಿಂದ ಇರಿದಿದ್ದಾನೆ. ಆಕೆಯೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಇದನ್ನೂ ಓದಿ: ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Published On - 9:29 am, Thu, 11 November 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?