AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಸ್ಯಾನಿಟೈಸರ್ ಕದಿಯುತ್ತಿರುವ ದೃಶ್ಯ
Lakshmi Hegde
|

Updated on:May 01, 2021 | 4:50 PM

Share

ಫೇಸ್​ಮಾಸ್ಕ್​ ಮತ್ತು ಹ್ಯಾಂಡ್ ಸ್ಯಾನಿಟೈಸರ್​ಗಳು ಈಗಂತೂ ಅಗತ್ಯವಸ್ತುಗಳಾಗಿವೆ. ಯಾವುದೇ ಕಚೇರಿ ಇರಲಿ, ಮನೆ, ರೆಸ್ಟೋರೆಂಟ್, ಹೋಟೆಲ್​​ಗಳ ಪ್ರವೇಶದ್ವಾರದ ಬಳಿಯೇ ಸ್ಯಾನಿಟೈಸರ್ ಇರುತ್ತದೆ. ಬ್ಯಾಂಕ್​, ಎಟಿಎಂ ಕೇಂದ್ರಗಳಲ್ಲೂ ಇದು ಸಾಮಾನ್ಯ. ಆದರೆ ಕಳ್ಳರು ಇದನ್ನೂ ಬಿಡುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ವ್ಯಕ್ತಿಯೊಬ್ಬ ಎಟಿಎಂ ಕೇಂದ್ರದೊಳಗೆ ಇಡಲಾಗಿದ್ದ ಸ್ಯಾನಿಟೈಸರ್​​ನ್ನು ಕದಿಯುವ ವಿಡಿಯೋ.

ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಎಂಬುವರು ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 33 ಸೆಕೆಂಡ್​ಗಳ ಫೂಟೇಜ್​ ಇದಾಗಿದೆ. ಬೆನ್ನಿಗೆ ದೊಡ್ಡ ಬ್ಯಾಗ್​ ಹಾಕಿಕೊಂಡು ಎಟಿಎಂ ಕೇಂದ್ರ ಪ್ರವೇಶಿಸುವ ಈತ ಎಟಿಎಂ ಮಶಿನ್​ನಿಂದ ಮೊದಲು ಹಣ ತೆಗೆಯುತ್ತಾನೆ. ನಂತರ ಕಾರ್ಡ್​ನ್ನು ಜೇಬಿನಲ್ಲಿ ಹಾಕುತ್ತಾನೆ. ಅಲ್ಲಿಂದ ಸುಮ್ಮನೆ ಹೊರಬರುವುದನ್ನು ಬಿಟ್ಟು, ಪಕ್ಕದಲ್ಲೇ ಇಡಲಾಗಿದ್ದ ಸ್ಯಾನಿಟೈಸರ್​ ಬಾಟಲನ್ನು ತೆಗೆದು ತನ್ನ ಬ್ಯಾಗ್​ಗೆ ಹಾಕಿಕೊಳ್ಳುವುದು ಈ ಸಿಸಿಟಿವ ಫೂಟೇಜ್​ನಲ್ಲಿ ಕಾಣಿಸುತ್ತದೆ.

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಇಟ್ಟ ಸ್ಯಾನಿಟೈಸರ್ ಬಾಟಲನ್ನು ಹೀಗೆ ಹೊತ್ತೊಯ್ಯುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?

ಭಾರತೀಯ ನೌಕಾಪಡೆಯಿಂದ ಆಕ್ಸಿಜನ್‌ಗಾಗಿ ಆಪರೇಷನ್‌ ಸಮುದ್ರ ಸೇತು ಕಾರ್ಯಾಚರಣೆ

Published On - 4:44 pm, Sat, 1 May 21

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ