AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಸ್ಯಾನಿಟೈಸರ್ ಕದಿಯುತ್ತಿರುವ ದೃಶ್ಯ
Lakshmi Hegde
|

Updated on:May 01, 2021 | 4:50 PM

Share

ಫೇಸ್​ಮಾಸ್ಕ್​ ಮತ್ತು ಹ್ಯಾಂಡ್ ಸ್ಯಾನಿಟೈಸರ್​ಗಳು ಈಗಂತೂ ಅಗತ್ಯವಸ್ತುಗಳಾಗಿವೆ. ಯಾವುದೇ ಕಚೇರಿ ಇರಲಿ, ಮನೆ, ರೆಸ್ಟೋರೆಂಟ್, ಹೋಟೆಲ್​​ಗಳ ಪ್ರವೇಶದ್ವಾರದ ಬಳಿಯೇ ಸ್ಯಾನಿಟೈಸರ್ ಇರುತ್ತದೆ. ಬ್ಯಾಂಕ್​, ಎಟಿಎಂ ಕೇಂದ್ರಗಳಲ್ಲೂ ಇದು ಸಾಮಾನ್ಯ. ಆದರೆ ಕಳ್ಳರು ಇದನ್ನೂ ಬಿಡುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ವ್ಯಕ್ತಿಯೊಬ್ಬ ಎಟಿಎಂ ಕೇಂದ್ರದೊಳಗೆ ಇಡಲಾಗಿದ್ದ ಸ್ಯಾನಿಟೈಸರ್​​ನ್ನು ಕದಿಯುವ ವಿಡಿಯೋ.

ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಎಂಬುವರು ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 33 ಸೆಕೆಂಡ್​ಗಳ ಫೂಟೇಜ್​ ಇದಾಗಿದೆ. ಬೆನ್ನಿಗೆ ದೊಡ್ಡ ಬ್ಯಾಗ್​ ಹಾಕಿಕೊಂಡು ಎಟಿಎಂ ಕೇಂದ್ರ ಪ್ರವೇಶಿಸುವ ಈತ ಎಟಿಎಂ ಮಶಿನ್​ನಿಂದ ಮೊದಲು ಹಣ ತೆಗೆಯುತ್ತಾನೆ. ನಂತರ ಕಾರ್ಡ್​ನ್ನು ಜೇಬಿನಲ್ಲಿ ಹಾಕುತ್ತಾನೆ. ಅಲ್ಲಿಂದ ಸುಮ್ಮನೆ ಹೊರಬರುವುದನ್ನು ಬಿಟ್ಟು, ಪಕ್ಕದಲ್ಲೇ ಇಡಲಾಗಿದ್ದ ಸ್ಯಾನಿಟೈಸರ್​ ಬಾಟಲನ್ನು ತೆಗೆದು ತನ್ನ ಬ್ಯಾಗ್​ಗೆ ಹಾಕಿಕೊಳ್ಳುವುದು ಈ ಸಿಸಿಟಿವ ಫೂಟೇಜ್​ನಲ್ಲಿ ಕಾಣಿಸುತ್ತದೆ.

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಇಟ್ಟ ಸ್ಯಾನಿಟೈಸರ್ ಬಾಟಲನ್ನು ಹೀಗೆ ಹೊತ್ತೊಯ್ಯುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?

ಭಾರತೀಯ ನೌಕಾಪಡೆಯಿಂದ ಆಕ್ಸಿಜನ್‌ಗಾಗಿ ಆಪರೇಷನ್‌ ಸಮುದ್ರ ಸೇತು ಕಾರ್ಯಾಚರಣೆ

Published On - 4:44 pm, Sat, 1 May 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ