AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Viral Video: ಎಟಿಎಂ ಕೇಂದ್ರಕ್ಕೆ ಹಣ ತೆಗೆದುಕೊಳ್ಳಲು ಹೋದವ ಸ್ಯಾನಿಟೈಸರ್​ ಕದ್ದ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಸ್ಯಾನಿಟೈಸರ್ ಕದಿಯುತ್ತಿರುವ ದೃಶ್ಯ
Lakshmi Hegde
|

Updated on:May 01, 2021 | 4:50 PM

Share

ಫೇಸ್​ಮಾಸ್ಕ್​ ಮತ್ತು ಹ್ಯಾಂಡ್ ಸ್ಯಾನಿಟೈಸರ್​ಗಳು ಈಗಂತೂ ಅಗತ್ಯವಸ್ತುಗಳಾಗಿವೆ. ಯಾವುದೇ ಕಚೇರಿ ಇರಲಿ, ಮನೆ, ರೆಸ್ಟೋರೆಂಟ್, ಹೋಟೆಲ್​​ಗಳ ಪ್ರವೇಶದ್ವಾರದ ಬಳಿಯೇ ಸ್ಯಾನಿಟೈಸರ್ ಇರುತ್ತದೆ. ಬ್ಯಾಂಕ್​, ಎಟಿಎಂ ಕೇಂದ್ರಗಳಲ್ಲೂ ಇದು ಸಾಮಾನ್ಯ. ಆದರೆ ಕಳ್ಳರು ಇದನ್ನೂ ಬಿಡುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ವ್ಯಕ್ತಿಯೊಬ್ಬ ಎಟಿಎಂ ಕೇಂದ್ರದೊಳಗೆ ಇಡಲಾಗಿದ್ದ ಸ್ಯಾನಿಟೈಸರ್​​ನ್ನು ಕದಿಯುವ ವಿಡಿಯೋ.

ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಎಂಬುವರು ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. 33 ಸೆಕೆಂಡ್​ಗಳ ಫೂಟೇಜ್​ ಇದಾಗಿದೆ. ಬೆನ್ನಿಗೆ ದೊಡ್ಡ ಬ್ಯಾಗ್​ ಹಾಕಿಕೊಂಡು ಎಟಿಎಂ ಕೇಂದ್ರ ಪ್ರವೇಶಿಸುವ ಈತ ಎಟಿಎಂ ಮಶಿನ್​ನಿಂದ ಮೊದಲು ಹಣ ತೆಗೆಯುತ್ತಾನೆ. ನಂತರ ಕಾರ್ಡ್​ನ್ನು ಜೇಬಿನಲ್ಲಿ ಹಾಕುತ್ತಾನೆ. ಅಲ್ಲಿಂದ ಸುಮ್ಮನೆ ಹೊರಬರುವುದನ್ನು ಬಿಟ್ಟು, ಪಕ್ಕದಲ್ಲೇ ಇಡಲಾಗಿದ್ದ ಸ್ಯಾನಿಟೈಸರ್​ ಬಾಟಲನ್ನು ತೆಗೆದು ತನ್ನ ಬ್ಯಾಗ್​ಗೆ ಹಾಕಿಕೊಳ್ಳುವುದು ಈ ಸಿಸಿಟಿವ ಫೂಟೇಜ್​ನಲ್ಲಿ ಕಾಣಿಸುತ್ತದೆ.

ಈ ಘಟನೆ ನಡೆದಿದ್ದು ಏಪ್ರಿಲ್​ 24ರಂದು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ನೆಟ್ಟಿಗರೂ ಸಹ ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಇಟ್ಟ ಸ್ಯಾನಿಟೈಸರ್ ಬಾಟಲನ್ನು ಹೀಗೆ ಹೊತ್ತೊಯ್ಯುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?

ಭಾರತೀಯ ನೌಕಾಪಡೆಯಿಂದ ಆಕ್ಸಿಜನ್‌ಗಾಗಿ ಆಪರೇಷನ್‌ ಸಮುದ್ರ ಸೇತು ಕಾರ್ಯಾಚರಣೆ

Published On - 4:44 pm, Sat, 1 May 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ