AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯ ಬಟ್ಟೆಬಿಚ್ಚಿ, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಇಬ್ಬರ ಬಂಧನ

ವ್ಯಕ್ತಿಯೊಬ್ಬನನ್ನು ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಬಾರ್ಮರ್​ನಲ್ಲಿ ಈ ಘಟನೆ ನಡೆದಿದೆ, ವಿಡಿಯೋ ವೈರಲ್​ ಆಗಿದ್ದು, ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವ್ಯಕ್ತಿಯ ಬಟ್ಟೆಬಿಚ್ಚಿ, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಇಬ್ಬರ ಬಂಧನ
ಪೊಲೀಸ್​
ನಯನಾ ರಾಜೀವ್
|

Updated on: Sep 22, 2024 | 10:16 AM

Share

ವ್ಯಕ್ತಿಯೊಬ್ಬನನ್ನು ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಬಾರ್ಮರ್​ನಲ್ಲಿ ಈ ಘಟನೆ ನಡೆದಿದೆ, ವಿಡಿಯೋ ವೈರಲ್​ ಆಗಿದ್ದು, ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವ್ಯಕ್ತಿಯನ್ನು ಬಟ್ಟೆಬಿಚ್ಚಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ, ನಂತರ ಬಾಟಲಿಯಿಂದ ಮೂತ್ರವನ್ನು ಕುಡಿಯಲು ಒತ್ತಾಯಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಬಾರ್ಮರ್ ಜಿಲ್ಲೆಯ ಚೋಹ್ತಾನ್ ಪ್ರದೇಶದ ಧನೌ ಪೊಲೀಸ್ ಠಾಣೆ ವ್ಯಾಪ್ತಿಯ ಬಮ್ನೋರ್ ಗ್ರಾಮದಲ್ಲಿ ನಡೆದಿದೆ.

ಈ ವ್ಯಕ್ತಿ ರಾತ್ರಿ ವೇಳೆ ಯಾರದೋ ಮನೆಗೆ ನುಗ್ಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಧನೌ ಪ್ರದೇಶದ ಮನೆಯಲ್ಲಿದ್ದವರು ಆತನನ್ನು ಹಿಡಿದು ಜಮೀನಿಗೆ ಕರೆದೊಯ್ದು ಅಲ್ಲಿ ಥಳಿಸಿದ್ದಾರೆ ಎಂದು ಅವರು ಹೇಳಿದರು.

ಪೊಲೀಸರು ಆರೋಪಿಗಳ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ತನಿಖೆ ಪ್ರಗತಿಯಲ್ಲಿದ್ದಾಗ ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ:ಕಳ್ಳತನದ ಆರೋಪ, ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ

ಜುಂಜರಾಮ್ ನೀಡಿದ ದೂರಿನ ಮೇರೆಗೆ ಧನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಾಟಲಿಯಲ್ಲಿ ಮೂತ್ರವಿದೆಯೇ ಎಂಬುದು ದೃಢಪಟ್ಟಿಲ್ಲ ಎಂದು ಹೆಚ್ಚುವರಿ ಎಸ್ಪಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು