AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಲೆಂದೇ ವರ್ಷದಲ್ಲಿ ಸುಮಾರು 200 ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ

ವರ್ಷಪೂರ್ತಿ ವಿಮಾನದಲ್ಲಿ ಕಳ್ಳತನ ಮಾಡುವುದನ್ನೇ ಕಸುಬಾಗಿಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವರ್ಷದಲ್ಲಿ 200 ಬಾರಿ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಲೆಂದೇ ವರ್ಷದಲ್ಲಿ ಸುಮಾರು 200 ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ
ಏರ್​ಪೋರ್ಟ್​
ನಯನಾ ರಾಜೀವ್
|

Updated on: May 14, 2024 | 9:54 AM

Share

ಕಳ್ಳತನ ಮಾಡಲೆಂದೇ ವರ್ಷದಲ್ಲಿ 200ಕ್ಕೂ ಅಧಿಕ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವರ್ಷದಲ್ಲಿ 200 ಬಾರಿ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಜೇಶ್​ ಕಪೂರ್ ಎಂಬಾತ ಕಳ್ಳತನ ಮಾಡಲೆಂದೇ ಕನಿಷ್ಠ 200 ಬಾರಿ ವಿಮಾನದಲ್ಲಿ ಸುಮಾರು 110 ದಿನಗಳ ಕಾಲ ಪ್ರಯಾಣಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐಜಿಐ ಉಷಾ ರಂಗ್ನಾನಿ ಮಾತನಾಡಿ, ಕಪೂರ್ ಅವರನ್ನು ಪಹರ್‌ಗಂಜ್‌ನಲ್ಲಿ ಕದ್ದ ಆಭರಣಗಳ ಜತೆ ಬಂಧಿಸಲಾಗಿದೆ ಎಂದು ಹೇಳಿದರು.

ಈ ಆಭರಣಗಳನ್ನು ಕರೋಲ್ ಬಾಗ್‌ನಿಂದ ಬಂಧಿಸಲ್ಪಟ್ಟ ಶರದ್ ಜೈನ್‌ಗೆ ಮಾರಾಟ ಮಾಡಲು ಯೋಜನೆ ರೂಪಿಸಿದ್ದ ಎಂದು ಅವರು ಹೇಳಿದರು. ಕಳೆದ ಮೂರು ತಿಂಗಳಲ್ಲಿ ಪ್ರತ್ಯೇಕ ವಿಮಾನಗಳಲ್ಲಿ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳು ವರದಿಯಾಗಿವೆ ಎಂದು ರಂಗಾನಿ ಹೇಳಿದ್ದಾರೆ. ನಂತರ ಐಜಿಐ ವಿಮಾನ ನಿಲ್ದಾಣದಿಂದ ಅಪರಾಧಿಗಳನ್ನು ಹಿಡಿಯಲು ವಿಶೇಷ ತಂಡವನ್ನು ರಚಿಸಲಾಗಿದೆ.

ಏಪ್ರಿಲ್ 11 ರಂದು ಹೈದರಾಬಾದ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರೊಬ್ಬರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದರು. ಫೆಬ್ರವರಿ 2 ರಂದು ಮತ್ತೊಂದು ಕಳ್ಳತನ ವರದಿಯಾಗಿದ್ದು, ಅಮೃತಸರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕಳೆದುಕೊಂಡಿದ್ದರು.

ತನಿಖೆಯ ಸಂದರ್ಭದಲ್ಲಿ ದೆಹಲಿ ಮತ್ತು ಅಮೃತಸರ ವಿಮಾನ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವಿಮಾನದ ಮ್ಯಾನಿಫೆಸ್ಟ್‌ಗಳನ್ನು ವಿಶ್ಲೇಷಿಸಲಾಗಿದೆ ಎಂದು ರಂಗಾನಿ ಹೇಳಿದರು. ಕಳ್ಳತನದ ಘಟನೆಗಳು ವರದಿಯಾದ ಎರಡೂ ವಿಮಾನಗಳಲ್ಲಿ ಕಾಣಿಸಿಕೊಂಡಿದ್ದರಿಂದ ಶಂಕಿತನನ್ನು ಶಾರ್ಟ್‌ಲಿಸ್ಟ್ ಮಾಡಲಾಗಿತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ಶಂಕಿತ ಪ್ರಯಾಣಿಕರ ಫೋನ್ ಸಂಖ್ಯೆಯನ್ನು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳಿಂದ ಪಡೆಯಲಾಗಿದೆ, ಆದರೆ ಬುಕ್ಕಿಂಗ್ ಸಮಯದಲ್ಲಿ ಅವರು ನಕಲಿ ಸಂಖ್ಯೆಯನ್ನು ಕೊಟ್ಟಿದ್ದರು ಎಂದು ಅಧಿಕಾರಿ ಹೇಳಿದರು.

ತಾಂತ್ರಿಕ ಕಣ್ಗಾವಲು ನಂತರ, ಕಪೂರ್ ಅವರ ಮೂಲ ಫೋನ್ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು ಮತ್ತು ಅವರು ಸಿಕ್ಕಿಬಿದ್ದರು. ನಿರಂತರ ವಿಚಾರಣೆಯಲ್ಲಿ, ಹೈದರಾಬಾದ್‌ನ ಒಂದು ಪ್ರಕರಣ ಸೇರಿದಂತೆ ಐದು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಹೆಚ್ಚಿನ ಹಣವನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಜೂಜಿಗೆ ಖರ್ಚು ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಕಪೂರ್ ದುರ್ಬಲ ಪ್ರಯಾಣಿಕರನ್ನು, ವಿಶೇಷವಾಗಿ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸುವ ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ. ಅಂತಹ ಪ್ರಯಾಣಿಕರು ತಮ್ಮ ಕೈಚೀಲಗಳನ್ನು  ತಾನು ಹಿಡಿದುಕೊಂಡು ಒಳ್ಳೆಯವನು ಎನಿಸಿಕೊಂಡು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್