AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ

2 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕ ಆಕೆಯೊಂದಿಗೆ ದೈಹಿಕ ಸಂಬಂಧವನ್ನೂ ಇಟ್ಟುಕೊಂಡಿದ್ದ. ಆಕೆ ಗರ್ಭಿಣಿಯಾಗಿದ್ದಳು. ಮದುವೆಯ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇತ್ತು. ಆದರೆ, ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಯುವಕ ಆಕೆಯನ್ನು ಚಲಿಸುವ ಕಾರಿನಿಂದ ಕೆಳಗೆ ತಳ್ಳಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಆತ ಹೀಗೆ ಮಾಡಿದ್ದೇಕೆ? ಎಂಬ ಮಾಹಿತಿ ಇಲ್ಲಿದೆ.

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ
Pregnant WomanImage Credit source: iStock
ಸುಷ್ಮಾ ಚಕ್ರೆ
|

Updated on:Feb 06, 2026 | 10:49 PM

Share

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ ಸ್ನೇಹಿತನ ಸಹಾಯದಿಂದ ಆಕೆಯನ್ನು ಕಾರಿನಿಂದ ಹೊರಗೆಸೆದಿದ್ದಾನೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

“ಆರೋಪಿಯೊಂದಿಗೆ ಸುಮಾರು 2 ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಯುವತಿ ತಿಳಿಸಿದ್ದಾಳೆ. ಆಕೆ 2 ತಿಂಗಳ ಗರ್ಭಿಣಿಯಾಗಿದ್ದಳು. ಆರೋಪಿಯು ಗರ್ಭಪಾತ ಮಾಡಿಸಿಕೊಳ್ಳುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

ಆ ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಜದ್ ಎಂಬ ಯುವಕನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು. ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು.

ಇದನ್ನೂ ಓದಿ: ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!

“ಆಕೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸರು ಹೇಳಿದ್ದಾರೆ. ತನಿಖೆಯ ನಂತರ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Fri, 6 February 26

ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!