AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಆ ಮುದ್ದು ನಾಯಿಮರಿಗಳು ನಿಮಗೇನು ಮಾಡಿದ್ವು, ಕೊಂದೇ ಬಿಡೋದಾ

ಕೆಲವೊಮ್ಮೆ ಮನುಷ್ಯರು ಎಷ್ಟು ಕ್ರೂರತೆಯನ್ನು ಪ್ರದರ್ಶಿಸುತ್ತಾರೆಂದರೆ ಇವರಿಗಿಂತ ಕಾಡು ಪ್ರಾಣಿಗಳೇ ಎಷ್ಟೋ ವಾಸಿ ಎನಿಸಿಬಿಡುತ್ತದೆ. ಪ್ರಾಣಿಗಳಿಗೂ ಕುಟುಂಬವಿರುತ್ತೆ, ಅವುಗಳಿಗೂ ಜೀವ ಇದೆ, ಬದುಕುವ ಹಕ್ಕಿದೆ ಎಂಬುದನ್ನು ಮರೆದು ರಕ್ಕಸರಂತೆ ನಡೆದುಕೊಂಡುಬಿಡುತ್ತಾರೆ. ಅಂಥಹದಲ್ಲೇ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಅಯ್ಯೋ ಆ ಮುದ್ದು ನಾಯಿಮರಿಗಳು ನಿಮಗೇನು ಮಾಡಿದ್ವು, ಕೊಂದೇ ಬಿಡೋದಾ
ನಾಯಿಮರಿ
ನಯನಾ ರಾಜೀವ್
|

Updated on:Dec 14, 2023 | 11:49 AM

Share

ಕೆಲವೊಮ್ಮೆ ಮನುಷ್ಯರು ಎಷ್ಟು ಕ್ರೂರತೆಯನ್ನು ಪ್ರದರ್ಶಿಸುತ್ತಾರೆಂದರೆ ಇವರಿಗಿಂತ ಕಾಡು ಪ್ರಾಣಿಗಳೇ ಎಷ್ಟೋ ವಾಸಿ ಎನಿಸಿಬಿಡುತ್ತದೆ. ಪ್ರಾಣಿಗಳಿಗೂ ಕುಟುಂಬವಿರುತ್ತೆ, ಅವುಗಳಿಗೂ ಜೀವ ಇದೆ, ಬದುಕುವ ಹಕ್ಕಿದೆ ಎಂಬುದನ್ನು ಮರೆದು ರಕ್ಕಸರಂತೆ ನಡೆದುಕೊಂಡುಬಿಡುತ್ತಾರೆ. ಅಂಥಹದಲ್ಲೇ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಒಂದು ಅಂಗಡಿ ಮುಂದೆ ವ್ಯಕ್ತಿಯೊಬ್ಬ ಸುಮ್ಮನೆ ಕುಳಿತುಕೊಂಡಿರುತ್ತಾನೆ ಅವನ ಎದುರು ಎರಡು ನಾಯಿಮರಿಗಳಿರುತ್ತವೆ, ಏಕಾಏಕಿ ಕೋಪಗೊಂದು ಆ ನಾಯಿ ಮರಿಗಳನ್ನು ಎತ್ತಿ ನೆಲಕ್ಕೆ ಎಸೆಯುತ್ತಾನೆ, ಜತೆಗೆ ಕಾಲಿನಲ್ಲಿ ಮರಿಗಳನ್ನು ಹಿಸುಕಿ ವ್ಯಾಘ್ರರೂಪ ತಾಳುತ್ತಾನೆ. ಆದರೆ ಆ ಪುಟ್ಟ ಮರಿಗಳು ನಿಮಗೇನು ಮಾಡಿದ್ದವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಪ್ರಶ್ನೆ ಮಾಡುತ್ತಿದ್ದಾರೆ.

20 ಸೆಕೆಂಡುಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆಯ ವೇಳೆ ಅಂಗಡಿಯೊಂದರಲ್ಲಿದ್ದ ಮತ್ತೊಬ್ಬ ವ್ಯಕ್ತಿ ನಾಯಿ ಮರಿ ಕಿರುಚಾಟ ಕೇಳಿ ಹೊರಗೆ ಓಡಿ ಬರುತ್ತಿರುವುದು ಕಂಡು ಬಂದಿದೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟ್ಯಾಗ್ ಮಾಡುವ ಮೂಲಕ ಮರು ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ಓದಿ: Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

ಇದು ಭಯಾನಕ ಮತ್ತು ಗೊಂದಲದ ಸಂಗತಿಯಾಗಿದೆ. ಈ ಅನಾಗರಿಕತೆಗೆ ಮನುಷ್ಯನಿಗೆ ಶಿಕ್ಷೆಯಾಗಬೇಕು ಎಂಬುದರಲ್ಲಿ ಸಂದೇಹವಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಅವರೇ, ದಯವಿಟ್ಟು ನೋಡಿ ಎಂದು ಬರೆದಿದ್ದಾರೆ.

ಬಳಿಕ ವಿಡಿಯೋವನ್ನು ಗಮನಿಸಿದ ಮುಖ್ಯಮಂತ್ರಿ ನ್ಯಾಯ ದೊರಕಿಸಲು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನ್ಯಾಯ ಒದಗಿಸಲು ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಅನಾಗರಿಕ ಕೃತ್ಯಗಳನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಮತ್ತು ಜವಾಬ್ದಾರಿಯುತ ವ್ಯಕ್ತಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಚೌಹಾಣ್​ ಎಕ್ಸ್​ನಲ್ಲಿ ಬರೆದಿದ್ದಾರೆ.

ಸ್ಥಳೀಯ ಪೊಲೀಸರು ಕೂಡ ಘಟನೆಯನ್ನು ಗಮನಿಸಿ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:51 pm, Sun, 10 December 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ