Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಆ ಮುದ್ದು ನಾಯಿಮರಿಗಳು ನಿಮಗೇನು ಮಾಡಿದ್ವು, ಕೊಂದೇ ಬಿಡೋದಾ

ಕೆಲವೊಮ್ಮೆ ಮನುಷ್ಯರು ಎಷ್ಟು ಕ್ರೂರತೆಯನ್ನು ಪ್ರದರ್ಶಿಸುತ್ತಾರೆಂದರೆ ಇವರಿಗಿಂತ ಕಾಡು ಪ್ರಾಣಿಗಳೇ ಎಷ್ಟೋ ವಾಸಿ ಎನಿಸಿಬಿಡುತ್ತದೆ. ಪ್ರಾಣಿಗಳಿಗೂ ಕುಟುಂಬವಿರುತ್ತೆ, ಅವುಗಳಿಗೂ ಜೀವ ಇದೆ, ಬದುಕುವ ಹಕ್ಕಿದೆ ಎಂಬುದನ್ನು ಮರೆದು ರಕ್ಕಸರಂತೆ ನಡೆದುಕೊಂಡುಬಿಡುತ್ತಾರೆ. ಅಂಥಹದಲ್ಲೇ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಅಯ್ಯೋ ಆ ಮುದ್ದು ನಾಯಿಮರಿಗಳು ನಿಮಗೇನು ಮಾಡಿದ್ವು, ಕೊಂದೇ ಬಿಡೋದಾ
ನಾಯಿಮರಿ
Follow us
ನಯನಾ ರಾಜೀವ್
|

Updated on:Dec 14, 2023 | 11:49 AM

ಕೆಲವೊಮ್ಮೆ ಮನುಷ್ಯರು ಎಷ್ಟು ಕ್ರೂರತೆಯನ್ನು ಪ್ರದರ್ಶಿಸುತ್ತಾರೆಂದರೆ ಇವರಿಗಿಂತ ಕಾಡು ಪ್ರಾಣಿಗಳೇ ಎಷ್ಟೋ ವಾಸಿ ಎನಿಸಿಬಿಡುತ್ತದೆ. ಪ್ರಾಣಿಗಳಿಗೂ ಕುಟುಂಬವಿರುತ್ತೆ, ಅವುಗಳಿಗೂ ಜೀವ ಇದೆ, ಬದುಕುವ ಹಕ್ಕಿದೆ ಎಂಬುದನ್ನು ಮರೆದು ರಕ್ಕಸರಂತೆ ನಡೆದುಕೊಂಡುಬಿಡುತ್ತಾರೆ. ಅಂಥಹದಲ್ಲೇ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಒಂದು ಅಂಗಡಿ ಮುಂದೆ ವ್ಯಕ್ತಿಯೊಬ್ಬ ಸುಮ್ಮನೆ ಕುಳಿತುಕೊಂಡಿರುತ್ತಾನೆ ಅವನ ಎದುರು ಎರಡು ನಾಯಿಮರಿಗಳಿರುತ್ತವೆ, ಏಕಾಏಕಿ ಕೋಪಗೊಂದು ಆ ನಾಯಿ ಮರಿಗಳನ್ನು ಎತ್ತಿ ನೆಲಕ್ಕೆ ಎಸೆಯುತ್ತಾನೆ, ಜತೆಗೆ ಕಾಲಿನಲ್ಲಿ ಮರಿಗಳನ್ನು ಹಿಸುಕಿ ವ್ಯಾಘ್ರರೂಪ ತಾಳುತ್ತಾನೆ. ಆದರೆ ಆ ಪುಟ್ಟ ಮರಿಗಳು ನಿಮಗೇನು ಮಾಡಿದ್ದವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಪ್ರಶ್ನೆ ಮಾಡುತ್ತಿದ್ದಾರೆ.

20 ಸೆಕೆಂಡುಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆಯ ವೇಳೆ ಅಂಗಡಿಯೊಂದರಲ್ಲಿದ್ದ ಮತ್ತೊಬ್ಬ ವ್ಯಕ್ತಿ ನಾಯಿ ಮರಿ ಕಿರುಚಾಟ ಕೇಳಿ ಹೊರಗೆ ಓಡಿ ಬರುತ್ತಿರುವುದು ಕಂಡು ಬಂದಿದೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟ್ಯಾಗ್ ಮಾಡುವ ಮೂಲಕ ಮರು ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ಓದಿ: Bihar News: ಬಿಹಾರದಲ್ಲಿ 30 ಬೀದಿ ನಾಯಿಗಳಿಗೆ ಶೂಟ್ ಮಾಡಿ ಹತ್ಯೆ; ಕಾರಣ ಇಲ್ಲಿದೆ

ಇದು ಭಯಾನಕ ಮತ್ತು ಗೊಂದಲದ ಸಂಗತಿಯಾಗಿದೆ. ಈ ಅನಾಗರಿಕತೆಗೆ ಮನುಷ್ಯನಿಗೆ ಶಿಕ್ಷೆಯಾಗಬೇಕು ಎಂಬುದರಲ್ಲಿ ಸಂದೇಹವಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಅವರೇ, ದಯವಿಟ್ಟು ನೋಡಿ ಎಂದು ಬರೆದಿದ್ದಾರೆ.

ಬಳಿಕ ವಿಡಿಯೋವನ್ನು ಗಮನಿಸಿದ ಮುಖ್ಯಮಂತ್ರಿ ನ್ಯಾಯ ದೊರಕಿಸಲು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನ್ಯಾಯ ಒದಗಿಸಲು ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಅನಾಗರಿಕ ಕೃತ್ಯಗಳನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಮತ್ತು ಜವಾಬ್ದಾರಿಯುತ ವ್ಯಕ್ತಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಚೌಹಾಣ್​ ಎಕ್ಸ್​ನಲ್ಲಿ ಬರೆದಿದ್ದಾರೆ.

ಸ್ಥಳೀಯ ಪೊಲೀಸರು ಕೂಡ ಘಟನೆಯನ್ನು ಗಮನಿಸಿ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:51 pm, Sun, 10 December 23

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು