AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ವಂಚನೆಯನ್ನು ಅರೆಕ್ಷಣದಲ್ಲಿ ಬಯಲು ಮಾಡಿದ ಪತ್ನಿ; ಪ್ರೇಯಸಿಯೊಂದಿಗೆ ಹೋಟೆಲ್​ಗೆ ಹೋಗಿದ್ದವನ ಪೀಕಲಾಟ !

ಈ ವ್ಯಕ್ತಿ ಗುಜರಾತ್​ ಮೂಲದ ಉದ್ಯಮಿಯಾಗಿದ್ದು, ಈತನ ಪತ್ನಿ ಅದೇ ಕಂಪನಿಯಲ್ಲಿ ಡೈರೆಕ್ಟರ್​. ಉದ್ಯಮಿಯ ಪತ್ನಿಗೆ ಮೊದಲಿನಿಂದಲೂ ಪತಿ ಮೇಲೆ ಅನುಮಾನವಿತ್ತು.

ಪತಿಯ ವಂಚನೆಯನ್ನು ಅರೆಕ್ಷಣದಲ್ಲಿ ಬಯಲು ಮಾಡಿದ ಪತ್ನಿ; ಪ್ರೇಯಸಿಯೊಂದಿಗೆ ಹೋಟೆಲ್​ಗೆ ಹೋಗಿದ್ದವನ ಪೀಕಲಾಟ !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 10:42 AM

Share

ಪುಣೆ: 41 ವರ್ಷದ ವ್ಯಕ್ತಿ ಮತ್ತು ಆತನ ಪ್ರೇಯಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಪುಣೆಯ ಹೋಟೆಲ್​​ವೊಂದಕ್ಕೆ ಪ್ರಿಯತಮೆಯೊಂದಿಗೆ ಹೋಗಿದ್ದ. ಅಲ್ಲಿ ತಪಾಸಣೆ ಮಾಡುವಾಗ ತನ್ನ ಪ್ರಿಯತಮೆಯ ಗುರುತು ದೃಢೀಕರಿಸಲು ಪತ್ನಿಯ ಆಧಾರ್ ಕಾರ್ಡ್​ ಕೊಟ್ಟಿದ್ದಾನೆ. ಸದ್ಯ ವ್ಯಕ್ತಿ ಮತ್ತು ಆತನ ಪ್ರೇಯಸಿ ಇಬ್ಬರ ವಿರುದ್ಧವೂ ಹಿಂಜೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ವ್ಯಕ್ತಿ ಗುಜರಾತ್​ ಮೂಲದ ಉದ್ಯಮಿಯಾಗಿದ್ದು, ಈತನ ಪತ್ನಿ ಅದೇ ಕಂಪನಿಯಲ್ಲಿ ಡೈರೆಕ್ಟರ್​. ಉದ್ಯಮಿಯ ಪತ್ನಿಗೆ ಮೊದಲಿನಿಂದಲೂ ಪತಿ ಮೇಲೆ ಅನುಮಾನವಿತ್ತು. ಇದೇ ಕಾರಣಕ್ಕೆ ಪತಿಯ ಕಾರಿನಲ್ಲಿ ಜಿಪಿಎಸ್​ ಕೂಡ ಅಳವಡಿಸಿದ್ದರು.  ಕಳೆದ ನವೆಂಬರ್​​ನಲ್ಲಿ ಈತ ಬೆಂಗಳೂರಿಗೆ ಬಿಜಿನೆಸ್​ ಟ್ರಿಪ್​ಗೆ ಹೋಗುತ್ತೇನೆ ಎಂದು ಹೇಳಿದ್ದ, ಆದರೆ ಆಕೆ ಜಿಪಿಎಸ್ ಟ್ರ್ಯಾಕರ್​​ನಲ್ಲಿ ಚೆಕ್​ ಮಾಡಿದಾಗ ಕಾರು ಪುಣೆಗೆ ಹೋಗಿದ್ದು ಬೆಳಕಿಗೆ ಬಂದಿದೆ.

ಮಹಿಳೆ ಸುಮ್ಮನಿರದೆ ಜಿಪಿಎಸ್​ ಟ್ರ್ಯಾಕರ್​ ತೋರಿಸಿದ ಲೊಕೇಶನ್​​ನ ಹೋಟೆಲ್​ಗೆ ಕರೆ ಮಾಡಿ ಪತಿಯ ಬಗ್ಗೆ ವಿಚಾರಿಸಿದ್ದಾರೆ. ಆಗ ಹೋಟೆಲ್​ ಸ್ಟಾಪ್​,  ಉದ್ಯಮಿ ತಮ್ಮ ಪತ್ನಿಯೊಂದಿಗೇ ಇಲ್ಲಿಗೆ ಬಂದಿದ್ದಾಗಿ ತಿಳಿಸಿದಾಗ ನಿಜವಾದ ಪತ್ನಿ ಶಾಕ್​ ಆಗಿದ್ದಾರೆ.  ಆದರೆ ಬಳಿಕ ಗೊತ್ತಾದ ಸತ್ಯವೇನೆಂದರೆ, ಈ ಉದ್ಯಮಿ ಪತ್ನಿಯ ಆಧಾರ್​ ಕಾರ್ಡ್ ತೋರಿಸಿ, ಇನ್ನೊಬ್ಬ ಮಹಿಳೆಯೊಂದಿಗೆ ಹೋಟೆಲ್​ ಹೋಗಿದ್ದಾನೆ. ಸದ್ಯ ಆಕೆ ನಾಪತ್ತೆಯಾಗಿದ್ದು, ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Hrithik Roshan: ಮತ್ತೆ ಸಬಾ ಜತೆ ಕಾಣಿಸಿಕೊಂಡ ಹೃತಿಕ್; ಅಭಿಮಾನಿಗಳಿಗೆ ಹೆಚ್ಚಿತು ಅನುಮಾನ

Published On - 9:59 am, Sat, 5 February 22

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ