AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ನೋಡ್ತಾ ಮೈಮರೆಯಬೇಡಿ; ಮೆಟ್ರೋ ನಿಲ್ದಾಣದಲ್ಲಿ ಮೊಬೈಲ್​ನಲ್ಲೇ ಮುಳುಗಿದ್ದ ವ್ಯಕ್ತಿಗೆ ಏನಾಯ್ತು ನೋಡಿ!

Viral Video: ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ ಮೊಬೈಲ್ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ ರೈಲ್ವೇ ಟ್ರಾಕ್​ಗೆ ಬಿದ್ದುಬಿಟ್ಟಿದ್ದಾನೆ. ಮೊಬೈಲ್ ನೋಡುತ್ತಾ ತಾನು ಎಲ್ಲಿ ಹೋಗುತ್ತಿದ್ದೇನೆ ಎಂಬ ಪರಿವೆ ಇಲ್ಲದೆ ಈ ದುರ್ಘಟನೆ ಸಂಭವಿಸಿದೆ.

ಮೊಬೈಲ್ ನೋಡ್ತಾ ಮೈಮರೆಯಬೇಡಿ; ಮೆಟ್ರೋ ನಿಲ್ದಾಣದಲ್ಲಿ ಮೊಬೈಲ್​ನಲ್ಲೇ ಮುಳುಗಿದ್ದ ವ್ಯಕ್ತಿಗೆ ಏನಾಯ್ತು ನೋಡಿ!
ಮೆಟ್ರೋ ಹಳಿಗೆ ವ್ಯಕ್ತಿ ಬಿದ್ದ ದೃಶ್ಯ
TV9 Web
| Edited By: |

Updated on:Feb 07, 2022 | 1:26 PM

Share

ಇಂದಿನ ದಿನಮಾನದಲ್ಲಿ ಮೊಬೈಲ್ ಫೋನ್​ಗಳು ನಮ್ಮ ಜೀವನದ ಅವಿಭಾಜ್ಯ ಅಂಗ ಎಂಬಂತಾಗಿದೆ. ಏನೇ ಅದ್ರೂ ಮೊಬೈಲ್ ಇಲ್ಲದೆ ಒಂದು ಹೊತ್ತು ಕಳೆಯುವುದು ಕೂಡ ಕಷ್ಟಸಾಧ್ಯ, ಮೊಬೈಲ್ ನೇ ಅವಲಂಬಿಸಿ ದಿನನಿತ್ಯ ನೂರಾರು ಕೆಲಸಗಳನ್ನು ಮಾಡುತ್ತೇವೆ. ವೈಯಕ್ತಿಕ ಮಾಹಿತಿ ಶೇಖರಣೆ, ಖಾಸಗಿ ಮಾತುಕತೆ, ಕೆಲಸಗಳು, ಕೆಲಸಕ್ಕೆ ಸಂಬಂಧಿಸಿ ಮೈಲ್​​ಗಳು, ಬ್ಯಾಂಕಿಂಗ್, ಫಿಟ್​ನೆಸ್, ಸಮಯ, ಕುಟುಂಬ ಹೀಗೆ ನೂರಾರು ಕೆಲಸಗಳು ಅಂಗೈಯಲ್ಲೇ ಆಗುತ್ತವೆ. ಮನರಂಜನೆ, ಸಾಮಾಜಿಕ ಸಂಪರ್ಕಕ್ಕೆ ಅಂತೂ ಮೊಬೈಲ್​ ಅತಿ ಮುಖ್ಯ ವಸ್ತುವಾಗಿದೆ. ಜನರು ಸಾಮಾನ್ಯವಾಗಿ ಸಣ್ಣ ಸಮಯಾವಕಾಶ ಸಿಕ್ಕರೂ ತಮ್ಮ ಸ್ಮಾರ್ಟ್ ಫೋನ್ ಹೊರತೆಗೆದು ಕೂರುತ್ತಾರೆ. ಎಲ್ಲಿ ಮೊಬೈಲ್ ತೆಗೆಯಬಾರದು ಅಥವಾ ಇಂಥಾ ಕಡೆ ಮೊಬೈಲ್ ಬಳಕೆ ಅಪಾಯ ಎಂದು ಆದರೂ ಅಲ್ಲೂ ಮೊಬೈಲ್ ಇಲ್ಲದೆ ಬದುಕುವುದು ಜನರಿಗೆ ಕಷ್ಟ ಎಂಬ ಹಾಗೆ ಆಗಿಬಿಟ್ಟಿದೆ. ಇದರಿಂದ ಕೆಲವೊಮ್ಮೆ ಅಪಾಯವೂ ಸಂಭವಿಸುತ್ತದೆ.

ಮೊಬೈಲ್​ನಿಂದ ಸೃಷ್ಟಿಯಾದ ಅವಾಂತರದ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ಮೆಟ್ರೋ ರೈಲು ನಿಲ್ದಾಣದಲ್ಲಿ ಇಂತಹ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ ಮೊಬೈಲ್ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ ರೈಲ್ವೇ ಟ್ರಾಕ್​ಗೆ ಬಿದ್ದುಬಿಟ್ಟಿದ್ದಾನೆ. ಮೊಬೈಲ್ ನೋಡುತ್ತಾ ತಾನು ಎಲ್ಲಿ ಹೋಗುತ್ತಿದ್ದೇನೆ ಎಂಬ ಪರಿವೆ ಇಲ್ಲದೆ ಈ ದುರ್ಘಟನೆ ಸಂಭವಿಸಿದೆ.

ಒಬ್ಬ ಸ್ಮಾರ್ಟ್​ಫೋನ್ ಬಳಕೆದಾರ ಬ್ಯುಸಿ ಮೆಟ್ರೋ ನಿಲ್ದಾಣ ದೆಹಲಿಯಲ್ಲಿ ರೈಲ್ವೇ ಟ್ರಾಕ್ ಮೇಲೆ ಬಿದ್ದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊಬೈಲ್ ಬಳಕೆದಾರ ರೈಲ್ವೇ ಟ್ರ್ಯಾಕ್ ಮೇಲೆ ಬೀಳುವುದು ಹಾಗೂ ಆ ಬಳಿಕ ಅಲ್ಲಿಂದ ಮೇಲೆ ಹತ್ತಲು ಕಷ್ಟಪಡುತ್ತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಆತನಿಗೆ ಅಲ್ಲಿದ್ದ ಸಿಐಎಸ್​ಎಫ್ ಸಿಬ್ಬಂದಿ ಮೇಲೆ ಹತ್ತಲು ಸಹಾಯ ಮಾಡಿದ್ದಾರೆ.

ಘಟನೆಯಲ್ಲಿ ರೈಲ್ವೇ ಟ್ರ್ಯಾಕ್​ಗೆ ಬಿದ್ದ ವ್ಯಕ್ತಿಗೆ ಹೆಚ್ಚೇನೂ ಗಾಯಗಳಾಗಿಲ್ಲ. ಅಷ್ಟೇ ಅಲ್ಲದೆ ಆ ಸಮಯದಲ್ಲಿ ಯಾವುದೇ ರೈಲು ಆ ಹಳಿಯ ಮೇಲೆ ಬರುತ್ತಿರಲಿಲ್ಲ. ಹೀಗಾಗಿ ಅದೃಷ್ಟವಷಾತ್ ದೊಡ್ಡ ಅನಾಹುತವೊಂದು ಸಣ್ಣದರಲ್ಲೇ ತಪ್ಪಿದೆ. ಮೆಟ್ರೋ ಹಳಿಯ ಮೇಲೆ ರೈಲು ಬರುವ ಮೊದಲೇ ಆತ ಮೇಲೆ ಬರಲು ಅಲ್ಲಿನ ಸಿಬ್ಬಂದಿ ಕೂಡ ಸಹಕಾರ ನೀಡಿದ್ದಾರೆ. ಆದರೆ, ಈ ಘಟನೆಯಿಂದ ಮೊಬೈಲ್ ಬಳಕೆ ಮಾಡುವಾಗ ನಾವು ಎಷ್ಟು ಎಚ್ಚರವಾಗಿ ಇರಬೇಕು ಎಂದು ಅರ್ಥಮಾಡಿಕೊಳ್ಳಲೇಬೇಕು. ಮೊಬೈಲ್​ನಲ್ಲೇ ಮನಸು ಕಳೆದು, ಲೋಕವನ್ನೇ ಮರೆತು ವ್ಯವಹರಿಸಿದರೆ ಇಂತಹ ಸಮಸ್ಯೆಗಳು ಎದುರಾಗಬಹುದು. ಈ ಬಗ್ಗೆ ಸಾಮಾನ್ಯರು ಗಮನ ಇಟ್ಟುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳು, ಅಪಾಯಕಾರಿ ಸ್ಥಳಗಳಲ್ಲಿ ಹೀಗೆ ಮೈಮರೆತು ಮೊಬೈಲ್ ಬಳಸದಂತೆ ಎಚ್ಚರವಾಗಿ ಇರಬೇಕು.

ಇದನ್ನೂ ಓದಿ: ಲತಾಜೀ ಮೃತದೇಹಕ್ಕೆ ಶಾರುಖ್​ ಉಗಿದರು ಎಂಬ ಆರೋಪ; ವೈರಲ್​ ವಿಡಿಯೋದಲ್ಲಿ ನಿಜಕ್ಕೂ ಇರೋದೇನು?

ಇದನ್ನೂ ಓದಿ: ಪವಾಡಸದೃಶ ರೀತಿಯಲ್ಲಿ ಬಚಾವಾದ ಪರ್ವತಾರೋಹಿ; ಇಲ್ಲಿದೆ ವೈರಲ್ ವಿಡಿಯೋ

Published On - 1:25 pm, Mon, 7 February 22

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ