AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ

ಪತ್ನಿಯ ಮೃತದೇಹವನ್ನು ಹೊತ್ತು ವ್ಯಕ್ತಿಯೊಬ್ಬ ಕಿಲೋಮೀಟರ್​ಗಟ್ಟಲೆ ನಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಾಪುಟ್ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಆಸ್ಪತ್ರೆಯಿಂದ ಹಿಂದಿರುಗುವಾಗ ಆಟೋದಲ್ಲಿ ಪತ್ನಿ ಮೃತಪಟ್ಟಿದ್ದು, ಬಳಿಕ ಹೆಗಲ ಮೇಲೆ ಹೊತ್ತು ನಡೆದಿದ್ದಾರೆ.

Andhra Pradesh: ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ
ರಸ್ತೆ
ನಯನಾ ರಾಜೀವ್
|

Updated on:Feb 09, 2023 | 11:28 AM

Share

ಪತ್ನಿಯ ಮೃತದೇಹವನ್ನು ಹೊತ್ತು ವ್ಯಕ್ತಿಯೊಬ್ಬ ಕಿಲೋಮೀಟರ್​ಗಟ್ಟಲೆ ನಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಾಪುಟ್ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಆಸ್ಪತ್ರೆಯಿಂದ ಹಿಂದಿರುಗುವಾಗ ಆಟೋದಲ್ಲಿ ಪತ್ನಿ ಮೃತಪಟ್ಟಿದ್ದು, ಬಳಿಕ ಹೆಗಲ ಮೇಲೆ ಹೊತ್ತು ನಡೆದಿದ್ದಾರೆ. ಪೊಲೀಸರು ಇದನ್ನು ಗಮನಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಸಂಗಿವಲಸದಲ್ಲಿರುವ ತನ್ನ ಅಸ್ವಸ್ಥ ಪತ್ನಿಯನ್ನು ಪಾಂಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದು, ಸುಮಾರು 100 ಕಿ.ಮೀ ದೂರದಲ್ಲಿರುವ ಮನೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.

ಪಾಂಗಿ ಅವರು ತಮ್ಮ ಹಳ್ಳಿಗೆ ಮರಳಲು ಆಟೋ ರಿಕ್ಷಾವನ್ನು ಬಾಡಿಗೆಗೆ ಪಡೆದರು, ಆದರೆ ಪತ್ನಿ ಅವರು ವಿಜಯನಗರದ ಬಳಿ ಮಧ್ಯದಲ್ಲಿ ನಿಧನರಾದರು. ನಂತರ ಆಟೋ ಚಾಲಕ ಪ್ರಯಾಣ ಮುಂದುವರಿಸಲು ನಿರಾಕರಿಸಿ ಚೆಲ್ಲೂರು ರಿಂಗ್ ರೋಡ್​ನಲ್ಲಿ ಅವರನ್ನು ಇಳಿಸಿದ್ದಾನೆ. ಬೇರೆ ದಾರಿ ಕಾಣದೆ ಪಾಂಗಿ ತನ್ನ ಹೆಂಡತಿಯ ಶವವನ್ನು ಹೆಗಲ ಮೇಲೆ ಹೊತ್ತು ಸುಮಾರು 80 ಕಿಲೋಮೀಟರ್ ದೂರದಲ್ಲಿದ್ದ ಮನೆಯ ಕಡೆಗೆ ನಡೆದಿದ್ದಾರೆ.

ಮತ್ತಷ್ಟು ಓದಿ: ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಸಾವು ಪ್ರಕರಣ: ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು

ಆರಂಭದಲ್ಲಿ ಆಂಧ್ರಪ್ರದೇಶದ ಪೊಲೀಸರಿಗೆ ಭಾಷೆಯ ಸಮಸ್ಯೆಯಿಂದ ಪಾಂಗಿ ಏನು ಹೇಳುತ್ತಿದ್ದನೆಂದು ತಿಳಿದುಕೊಳ್ಳಲು ಕಷ್ಟಪಡುತ್ತಿದ್ದರು. ನಂತರ ಒಡಿಶಾ ಮೂಲದ ವ್ಯಕ್ತಿಯ ಭಾಷೆಯನ್ನು ಅರ್ಥಮಾಡಿಕೊಳ್ಳುವ ವ್ಯಕ್ತಿ ಸಿಕ್ಕಿದ್ದಾರೆ. ಪೊಲೀಸ್ ಅಧಿಕಾರಿಗಳು, ಏನಾಯಿತು ಎಂಬುದನ್ನು ಖಚಿತಪಡಿಸಿಕೊಂಡ ನಂತರ, ಪಾಂಗಿ ಮತ್ತು ಅವರ ಪತ್ನಿಯ ಮೃತದೇಹಗಳನ್ನು ಅವರ ಗ್ರಾಮಕ್ಕೆ ಕೊಂಡೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದರು.

2016ರಲ್ಲಿ ಒಡಿಶಾದ ಭವಾನಿಪಟ್ನಾದಲ್ಲಿ ನಡೆದ ಘಟನೆಯನ್ನು ನೆನಪಿಸುವಂತಿದ್ದು, ಆಸ್ಪತ್ರೆಯೊಂದು ಶವಸಂಸ್ಕಾರವನ್ನು ನಿರಾಕರಿಸಿದ ಬಳಿಕ ಮತ್ತೊಬ್ಬ ವ್ಯಕ್ತಿ ದಾನಾ ಮಾಂಝಿ ತನ್ನ ಪತ್ನಿಯ ಶವವನ್ನು ಸುಮಾರು 12 ಕಿ.ಮೀ ವರೆಗೆ ತನ್ನ ಭುಜದ ಮೇಲೆ ಹೊತ್ತು ನಡೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Thu, 9 February 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ