AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ

ತಲೆಗೆ ತೀವ್ರವಾದ ಗಾಯವಾದ ಕಾರಣ ತೀವ್ರ ರಕ್ತಸ್ರಾವವಾಗಿ ಭಗವತ್​ ಸೀತಾರಾಮ್​ ಮೃತಪಟ್ಟಿದ್ದಾರೆ.   ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 2:37 PM

Share

ಅಲ್ಕೋಹಾಲ್​​ನಿಂದ ನಡೆಯುವ ಕ್ರೈಂಗಳು ಒಂದೆರಡಲ್ಲ. ಮದ್ಯದ ಅಮಲಿನಲ್ಲಿ ನಡೆಯುವ ಅಪರಾಧಗಳು ಒಂದಷ್ಟಾದರೆ, ಈ ಮದ್ಯಕ್ಕಾಗಿ ನಡೆಯುವ ಕ್ರೈಂಗಳು ಮತ್ತೊಂದಷ್ಟು. ಇದೀಗ ಮದ್ಯಪಾನ ಮಾಡುವ ವಿಚಾರಕ್ಕೆ 50 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಇಬ್ಬರು ಸ್ನೇಹಿತರೇ ಹತ್ಯೆ ಮಾಡಿರುವ ದುರ್ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.  ಮೃತ ವ್ಯಕ್ತಿಯನ್ನು ಭಗವತ್​ ಸೀತಾರಾಮ್​ ಫೇಸ್​​ ಎಂದು ಗುರುತಿಸಲಾಗಿದೆ. ಹಾಗೇ ಕೊಲೆ ಮಾಡಿದ ಆರೋಪಿಗಳನ್ನು ವಿನೋದ್​ ಲಕ್ಷ್ಮಣ್​ ವಾಂಖೆಡೆ (40) ಮತ್ತು ದಿಲೀಪ್​ ತೃಯಂಬಕ ಬೊಡ್ಡೆ ಎಂದು ಹೇಳಲಾಗಿದೆ.  

ಈ ಮೂವರು ಮದ್ಯಪಾನ ಮಾಡುವ ಯೋಜನೆ ಹಾಕಿಕೊಂಡು ಒಂದು ಲಿಕ್ಕರ್ ಶಾಪ್​ಗೆ ಹೋಗಿದ್ದರು. ಅಲ್ಲಿ ಭಗವತ್​ ಸೀತಾರಾಮ್​ ಅವರ ಬಳಿ 10 ರೂಪಾಯಿ ಕೊಡುವಂತೆ ಉಳಿದಿಬ್ಬರು ಕೇಳಿದ್ದಾರೆ. ಆದರೆ ಅಷ್ಟು ಹಣ ನೀಡಲು ಅವರು ನಿರಾಕರಿಸಿದ್ದಾರೆ ಮತ್ತು ಆ ಅಂಗಡಿಯಿಂದ ಹೊರಟಿದ್ದಾರೆ. ಕೋಪಗೊಂಡ ವಿನೋದ್​ ಮತ್ತು ದಿಲೀಪ್​ ಹಿಂದಿನಿಂದ ಹೋಗಿ ಭಗವತ್​ ಅವರ ತಲೆಗೆ ಮರದ ಕೋಲಿನಿಂದ ಹೊಡೆದಿದ್ದಾರೆ.  ತಲೆಗೆ ತೀವ್ರವಾದ ಗಾಯವಾದ ಕಾರಣ ರಕ್ತಸ್ರಾವವಾಗಿ ಭಗವತ್​ ಮೃತಪಟ್ಟಿದ್ದಾರೆ.

ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಲಿಕ್ಕರ್​ ಶಾಪ್​ವೊಂದರ ಬಳಿ ವ್ಯಕ್ತಿಯೊಬ್ಬ ರಕ್ತದ ಮಡುವಲ್ಲಿ ಬಿದ್ದಿದ್ದಾಗಿ ನಮಗೆ ಮಾಹಿತಿ ಬಂತು.  ನಾವು ಸ್ಥಳಕ್ಕೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್​ ಅಧಿಕಾರಿ ಪ್ರಲ್ಹಾದ್ ಕಟ್ಕರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಪಟಾಕಿ ಅವಘಡಗಳಾದರೆ ಚಿಕಿತ್ಸೆಗೆ ಸಿದ್ಧತೆ; ಆದ್ರೆ ಪಟಾಕಿ ತಂಟೆಗೆ ಹೋಗಬೇಡಿ: ಮಿಂಟೋ ಆಸ್ಪತ್ರೆ ವೈದ್ಯರ ಕಾಳಜಿ, ಸಿದ್ಧತೆ ಹೀಗಿದೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು