AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ

ತಲೆಗೆ ತೀವ್ರವಾದ ಗಾಯವಾದ ಕಾರಣ ತೀವ್ರ ರಕ್ತಸ್ರಾವವಾಗಿ ಭಗವತ್​ ಸೀತಾರಾಮ್​ ಮೃತಪಟ್ಟಿದ್ದಾರೆ.   ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 2:37 PM

Share

ಅಲ್ಕೋಹಾಲ್​​ನಿಂದ ನಡೆಯುವ ಕ್ರೈಂಗಳು ಒಂದೆರಡಲ್ಲ. ಮದ್ಯದ ಅಮಲಿನಲ್ಲಿ ನಡೆಯುವ ಅಪರಾಧಗಳು ಒಂದಷ್ಟಾದರೆ, ಈ ಮದ್ಯಕ್ಕಾಗಿ ನಡೆಯುವ ಕ್ರೈಂಗಳು ಮತ್ತೊಂದಷ್ಟು. ಇದೀಗ ಮದ್ಯಪಾನ ಮಾಡುವ ವಿಚಾರಕ್ಕೆ 50 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಇಬ್ಬರು ಸ್ನೇಹಿತರೇ ಹತ್ಯೆ ಮಾಡಿರುವ ದುರ್ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.  ಮೃತ ವ್ಯಕ್ತಿಯನ್ನು ಭಗವತ್​ ಸೀತಾರಾಮ್​ ಫೇಸ್​​ ಎಂದು ಗುರುತಿಸಲಾಗಿದೆ. ಹಾಗೇ ಕೊಲೆ ಮಾಡಿದ ಆರೋಪಿಗಳನ್ನು ವಿನೋದ್​ ಲಕ್ಷ್ಮಣ್​ ವಾಂಖೆಡೆ (40) ಮತ್ತು ದಿಲೀಪ್​ ತೃಯಂಬಕ ಬೊಡ್ಡೆ ಎಂದು ಹೇಳಲಾಗಿದೆ.  

ಈ ಮೂವರು ಮದ್ಯಪಾನ ಮಾಡುವ ಯೋಜನೆ ಹಾಕಿಕೊಂಡು ಒಂದು ಲಿಕ್ಕರ್ ಶಾಪ್​ಗೆ ಹೋಗಿದ್ದರು. ಅಲ್ಲಿ ಭಗವತ್​ ಸೀತಾರಾಮ್​ ಅವರ ಬಳಿ 10 ರೂಪಾಯಿ ಕೊಡುವಂತೆ ಉಳಿದಿಬ್ಬರು ಕೇಳಿದ್ದಾರೆ. ಆದರೆ ಅಷ್ಟು ಹಣ ನೀಡಲು ಅವರು ನಿರಾಕರಿಸಿದ್ದಾರೆ ಮತ್ತು ಆ ಅಂಗಡಿಯಿಂದ ಹೊರಟಿದ್ದಾರೆ. ಕೋಪಗೊಂಡ ವಿನೋದ್​ ಮತ್ತು ದಿಲೀಪ್​ ಹಿಂದಿನಿಂದ ಹೋಗಿ ಭಗವತ್​ ಅವರ ತಲೆಗೆ ಮರದ ಕೋಲಿನಿಂದ ಹೊಡೆದಿದ್ದಾರೆ.  ತಲೆಗೆ ತೀವ್ರವಾದ ಗಾಯವಾದ ಕಾರಣ ರಕ್ತಸ್ರಾವವಾಗಿ ಭಗವತ್​ ಮೃತಪಟ್ಟಿದ್ದಾರೆ.

ಘಟನೆ ನಡೆದ ಒಂದೇ ತಾಸಿನಲ್ಲಿ ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಲಿಕ್ಕರ್​ ಶಾಪ್​ವೊಂದರ ಬಳಿ ವ್ಯಕ್ತಿಯೊಬ್ಬ ರಕ್ತದ ಮಡುವಲ್ಲಿ ಬಿದ್ದಿದ್ದಾಗಿ ನಮಗೆ ಮಾಹಿತಿ ಬಂತು.  ನಾವು ಸ್ಥಳಕ್ಕೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್​ ಅಧಿಕಾರಿ ಪ್ರಲ್ಹಾದ್ ಕಟ್ಕರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಪಟಾಕಿ ಅವಘಡಗಳಾದರೆ ಚಿಕಿತ್ಸೆಗೆ ಸಿದ್ಧತೆ; ಆದ್ರೆ ಪಟಾಕಿ ತಂಟೆಗೆ ಹೋಗಬೇಡಿ: ಮಿಂಟೋ ಆಸ್ಪತ್ರೆ ವೈದ್ಯರ ಕಾಳಜಿ, ಸಿದ್ಧತೆ ಹೀಗಿದೆ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!