ಮಹಾರಾಷ್ಟ್ರ: ಬಿಜೆಪಿಯ ಪಂಕಜಾ ಮುಂಡೆ ಚುನಾವಣೆಯಲ್ಲಿ ಸೋತರೆ ಸತ್ತು ಹೋಗುತ್ತೇನೆ ಎಂದಿದ್ದ ವ್ಯಕ್ತಿ ಬಸ್​ ಅಪಘಾತದಲ್ಲಿ ಸಾವು

ಮಹಾರಾಷ್ಟ್ರದ ಬಿಜೆಪಿ ನಾಯಕಿ ಪಂಕಜಾ ಮುಂಡೆ ಒಂದೊಮ್ಮೆ ಚುನಾವಣೆಯಲ್ಲಿ ಸೋತರೆ ಸಾಯುತ್ತೇನೆ ಎಂದು ಹೇಳಿದ್ದ ವ್ಯಕ್ತಿಯೊಬ್ಬ ಬಸ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ: ಬಿಜೆಪಿಯ ಪಂಕಜಾ ಮುಂಡೆ ಚುನಾವಣೆಯಲ್ಲಿ ಸೋತರೆ ಸತ್ತು ಹೋಗುತ್ತೇನೆ ಎಂದಿದ್ದ ವ್ಯಕ್ತಿ ಬಸ್​ ಅಪಘಾತದಲ್ಲಿ ಸಾವು
Follow us
|

Updated on: Jun 10, 2024 | 11:58 AM

ಲೋಕಸಭಾ ಚುನಾವಣೆ(Lok Sabha Eelction)ಯಲ್ಲಿ ಒಂದೊಮ್ಮೆ ಬಿಜೆಪಿಯ ಪಂಕಜಾ ಮುಂಡೆ( Pankaja Munde)ಯವರೆ ಸೋಲು ಅನುಭವಿಸಿದರೆ ಸಾಯುತ್ತೇನೆ ಎಂದು ಹೇಳಿದ್ದ ವ್ಯಕ್ತಿ ಬಸ್​ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪಂಕಜಾ ಮುಂಡೆ ಮಹಾರಾಷ್ಟ್ರದ ಬೀಡ್​ ಜಿಲ್ಲೆಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಪಂಕಜಾ ಮುಂಡೆಯವರು ಸೋತರೆ ನಾನು ಇರುವುದಿಲ್ಲ ಎಂದು ಹೇಳಿದ್ದ ವ್ಯಕ್ತಿ ಬಸ್​ನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಅಹ್ಮದ್​ಪುರ-ಅಂಧೋರಿ ರಸ್ತೆಯ ಬೋರ್ಗಾಂವ್​ ಪಾಟಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದು ಆತ್ಮಹತ್ಯೆಯ ಸಾವು ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ಟ್ರಕ್ ಡ್ರೈವರ್ ಆಗಿದ್ದ ಸಚಿನ್ ಕೊಂಡಿಬಾ ಮುಂಡೆ ಎಂಬುವವರು ಮೃತರು. ಲೋಕಸಭಾ ಚುನಾವಣೆಗೂ ಮುನ್ನ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಸಚಿನ್ ಒಂದೊಮ್ಮೆ ಪಂಕಜಾ ಸೋತರೆ ತಾನು ಸಾಯುತ್ತೇನೆ ಎಂದು ಹೇಳಿದ್ದ. ಅದನ್ನು ಯಾರು ಕೂಡ ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪಂಕಜಾ ಮುಂಡೆ ಅವರು ಬೀಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಬಜರಂಗ್ ಸೋನಾವಾನೆ ವಿರುದ್ಧ 6,553 ಮತಗಳಿಂದ ಸೋತರು.

ಮತ್ತಷ್ಟು ಓದಿ: ಪುಣೆ ಪೋರ್ಷೆ ಕಾರು ಅಪಘಾತ: ಆರೋಪಿ ವೇದಾಂತ್​ ಅಗರ್ವಾಲ್ ತಂದೆಗೆ ಸೇರಿದ ರೆಸಾರ್ಟ್​ ನೆಲಸಮ

ಆತ ಖಿನ್ನತೆಗೆ ಒಳಗಾಗಿದ್ದ ಒಬ್ಬನೇ ಇರುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಪೊಲೀಸರು ಬಸ್​ ಚಾಲಕನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಸಚಿನ್ ಬಸ್‌ನ ಹಿಂದೆ ನಿಂತಿದ್ದರು ಮತ್ತು ಹಿಮ್ಮುಖವಾಗಿ ಓಡಿಸಿದಾಗ ಸಾವನ್ನಪ್ಪಿದ್ದಾರೆ.

ಪಂಕಜಾ ಮುಂಡೆ ಬೆಂಬಲಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಘಟನೆ ಭಾನುವಾರ ಬೆಳಗ್ಗೆ ಬೀಡ್‌ನಲ್ಲಿ ವರದಿಯಾಗಿದೆ ಎಂದು ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ. ಬಿಜೆಪಿ ನಾಯಕಿ ಬೀಡ್ ಸ್ಥಾನವನ್ನು ಕಳೆದುಕೊಂಡ ನಂತರ ಪಾಂಡುರಂಗ್ ಸೋನಾವಾನೆ ಎಂದು ಗುರುತಿಸಲಾದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್