AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಪಂಚತಾರಾ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ದಕ್ಷಿಣ ಕನ್ನಡದ ವ್ಯಕ್ತಿ ಬಂಧನ

ಕರ್ನಾಟಕದ ದಕ್ಷಿಣ ಕನ್ನಡ ಮೂಲದ ಮಹಮದ್ ಷರೀಫ್ (41) ಎಂದು ಗುರುತಿಸಲಾದ ವ್ಯಕ್ತಿ ನಕಲಿ ಬ್ಯುಸಿನೆಸ್ ಕಾರ್ಡ್ ತೋರಿಸಿ ಕಳೆದ ವರ್ಷ ಸುಮಾರು ಮೂರು ತಿಂಗಳ ಕಾಲ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

ದೆಹಲಿ: ಪಂಚತಾರಾ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ದಕ್ಷಿಣ ಕನ್ನಡದ ವ್ಯಕ್ತಿ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 22, 2023 | 2:07 PM

Share

ದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates) ಸರ್ಕಾರದ ಅಧಿಕಾರಿ ಎಂದು ಹೇಳಿ ದೆಹಲಿಯ ಐಷಾರಾಮಿ ಹೋಟೆಲ್​​ವೊಂದರಲ್ಲಿ ವಾಸ್ತವ್ಯ ಹೂಡಿ ₹ 23 ಲಕ್ಷಕ್ಕೂ ಹೆಚ್ಚು ಮೊತ್ತದ ಬಾಕಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಮೂಲದ ಮಹಮದ್ ಷರೀಫ್ (41) ಎಂದು ಗುರುತಿಸಲಾದ ವ್ಯಕ್ತಿ ನಕಲಿ ಬ್ಯುಸಿನೆಸ್ ಕಾರ್ಡ್ ತೋರಿಸಿ ಕಳೆದ ವರ್ಷ ಸುಮಾರು ಮೂರು ತಿಂಗಳ ಕಾಲ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ (Leela palace) ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಹೊಟೇಲ್‌ನ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದು, ಬಾಕಿ ಬಿಲ್‌ಗಳನ್ನು ಪಾವತಿಸದೆ ಹೋಟೆಲ್‌ಗೆ ₹ 23,46,413 ಮೌಲ್ಯದ ಅಪಾರ ನಷ್ಟ ಉಂಟು ಮಾಡಿದ್ದಾನೆ ಎಂದು ಹೇಳಲಾಗಿದೆ. ಘಟನೆಯ ನಂತರ, ಹೋಟೆಲ್‌ನ ಜನರಲ್ ಮ್ಯಾನೇಜರ್ ಎಂದು ಹೇಳಿಕೊಳ್ಳುವ ಅನುಪಮ್ ದಾಸ್ ಗುಪ್ತಾ ಅವರ ದೂರಿನ ಮೇರೆಗೆ ಪೊಲೀಸರು ಈ ವರ್ಷದ ಜನವರಿ 14 ರಂದು ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿಯ ಸರೋಜಿನಿ ನಗರದಲ್ಲಿರುವ ಲೀಲಾ ಪ್ಯಾಲೇಸ್‌ ಹೋಟೆಲ್​​ನ ಜನರಲ್ ಮ್ಯಾನೇಜರ್ ಅನುಪಮ್ ದಾಸ್ ಗುಪ್ತಾ ಅವರ ಆರೋಪ ಪ್ರಕಾರ ಆರೋಪಿ ಮಹಮದ್ ಷರೀಫ್ ವಿರುದ್ಧ ಸರೋಜಿನಿ ನಗರದ ಪೊಲೀಸ್ ಠಾಣೆಯಲ್ಲಿ 419/420/380 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಆಗಸ್ಟ್ 1, 2022 ರಿಂದ 20 ನವೆಂಬರ್ 2022 ರಂದು ನವದೆಹಲಿಯಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಈತ ವಾಸ್ತವ್ಯ ಹೂಡಿದ್ದು ಬಾಕಿ ಬಿಲ್ ಪಾವತಿಸದೆ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ತಂಡವನ್ನು ರಚಿಸಲಾಗಿದ್ದು, ಆರೋಪಿಯ ಪತ್ತೆಗೆ ಯತ್ನಿಸಲಾಗಿದೆ. ಷರೀಫ್​​ನ್ನು ಜನವರಿ 19 ರಂದು ದಕ್ಷಿಣ ಕನ್ನಡದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್ ಯಾರು ಎಂದು ಕೇಳಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ; ಹೇಳಿಕೆ ನೀಡಿದ ಬೆನ್ನಲ್ಲೇ ಬಂತು ಫೋನ್ ಕರೆ

ಪೊಲೀಸರ ಪ್ರಕಾರ, ಆರೋಪಿ ನಕಲಿ ಬ್ಯುಸಿನೆಸ್ ಕಾರ್ಡ್‌ನೊಂದಿಗೆ ಹೋಟೆಲ್‌ಗೆ ಪ್ರವೇಶಿಸಿ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ (ಹಿಸ್ ಹೈನೆಸ್ ಶೇಖ್ ಫಲಾಹ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಕಚೇರಿ) ಪ್ರಮುಖ ಕಾರ್ಯನಿರ್ವಹಣಾಧಿಕಾರಿಯಂತೆ ನಟಿಸಿದ್ದಾರೆ. ಆತ ಆಗಸ್ಟ್ 1, 2022 ರಂದು ಹೋಟೆಲ್​​ಗೆ ಬಂದಾಗ ಯುನೈಟೆಡ್ ಅರಬ್ ಎಮಿರೇಟ್ಸ್‌ನ ರೆಸಿಡೆಂಟ್ ಕಾರ್ಡ್ ಅನ್ನು ಸಹ ನೀಡಿದರು. ಸುಮಾರು 3.5 ತಿಂಗಳುಗಳ ಕಾಲ ಉಳಿದುಕೊಂಡ ನಂತರ, ಆರೋಪಿ ಹೋಟೆಲ್‌ನಿಂದ ಬೆಲೆಬಾಳುವ ವಸ್ತುಗಳೊಂದಿಗೆ ಓಡಿಹೋಗಿದ್ದು 20 ಲಕ್ಷ ಮೌಲ್ಯದ ನಂತರದ ದಿನಾಂಕದ ಚೆಕ್ ಅನ್ನು ಸಲ್ಲಿಸಿದರು. ಸಾಕಷ್ಟು ಹಣವಿಲ್ಲದೇ ಚೆಕ್ ಬೌನ್ಸ್ ಆಗಿದ್ದು, ಇದು ಆತನ ದುರಾಲೋಚನೆ ಮತ್ತು ಹೋಟೆಲ್ ಅಧಿಕಾರಿಗಳನ್ನು ವಂಚಿಸುವ ಸ ಉದ್ದೇಶವನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದಿದ್ದಾರೆ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Sun, 22 January 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ