AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2021 | 5:04 PM

Share

ಭೋಪಾಲ್​: ಮಧ್ಯಪ್ರದೇಶದ ಭೋಪಾಲ್​ ಮತ್ತು ಇಂಧೋರ್​​ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬೆದರಿಕೆ ಹಾಕಿದ್ದ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಧ್ಯಪ್ರದೇಶದ ಶುಜಾಲ್​​ಪುರದವನು ಎಂಬುದು ವಿಚಾರಣೆಯ ವೇಳೆ ಗೊತ್ತಾಗಿದೆ.

ಭೋಪಾಲ್​ನ ಗಾಂಧಿನಗರ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಅರುಣ್​ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜಾ ಭೋಜ್​ ಏರ್​​ಪೋರ್ಟ್​ಗೆ ಮಂಗಳವಾರ ಸಂಜೆ 5ಗಂಟೆಯ ಹೊತ್ತಿಗೆ ಅಪರಿಚಿತ ಕರೆಯೊಂದು ಬಂದಿತ್ತು. ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏರ್​ಪೋರ್ಟ್​ನವರು ಕೂಡಲೇ ನಮಗೆ ಕರೆ ಮಾಡಿ ವಿಷಯ ತಿಳಿಸಿದರು. ನಾವು ಕಾಲ್​ ಟ್ರೇಸ್​ ಮಾಡಿ ಈತನನ್ನು ಪತ್ತೆಹಚ್ಚಿದ್ದೇವೆ. ವಿಚಾರಣೆಗಾಗಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ. ಇವನನ್ನು ಸಮಗ್ರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಈತನಿಂದ ಕರೆ ಬಂದ ಬಳಿಕ ಮುಂಬೈಗೆ ಭೋಪಾಲ್​​ನಿಂದ ತೆರಳಿದ್ದ ವಿಮಾನವನ್ನು ಸರಿಯಾಗಿ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Pvt Schools Fees Torcher : ‘ಸಚಿವರು ಖಾಸಗಿ ಶಾಲೆಗಳ ಜತೆ ಶಾಮೀಲಾದಂತೆ ಕಾಣ್ತಿದೆ’

Man who threatens to hijack planes is arrested in Bhopal

Published On - 5:02 pm, Wed, 9 June 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ